ಬ್ರೇಕಿಂಗ್ ನ್ಯೂಸ್
16-02-23 01:55 pm Source: news18 ಸಿನಿಮಾ
ಕರಾವಳಿಯಲ್ಲಿ ನಡೆದ ನೈಜ್ಯ ಘಟನೆಯೇ ಸಿನಿಮಾಗೆ ಸ್ಫೂರ್ತಿ
ಸಿನಿಮಾ ಕುರಿತು ನಿರ್ದೇಶಕ ಮಂಸೋರೆ ಮಾತನಾಡಿದ್ದು ಮೂವಿ ಬಗ್ಗೆ ಕೆಲವೊಂದು ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಇದು ನೈಜ ಘಟನೆ ಆಧರಿಸಿದ ಸಿನಿಮಾ. ಕರಾವಳಿಯಲ್ಲಿ 20 ವರ್ಷ ಸಮುದಾಯವೊಂದು ಅನುಭವಿಸಿದ ನೋವು, ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ ನೀಡಿದೆ ಎಂದಿದ್ದಾರೆ.

ಸಿನಿಮಾಗಾಗಿ 9 ವರ್ಷದಿಂದ ಅಧ್ಯಯನ
ಈ ಸಿನಿಮಾ ಮಾಡಲು ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ. 2021ರಲ್ಲಿ ಈ ಘಟನೆಗೆ ಸಂಬಂಧಿಸಿದ ಮಹತ್ವದ ತೀರ್ಪು ಬಂತು. ಅಮೇಲೆಯೇ ಸಿನಿಮಾ ಮಾಡಲು ನಿರ್ಧಾರ ಮಾಡಿದೆವು. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ ಎಂದಿದ್ದಾರೆ.

ಸಮುದಾಯದ ಒಬ್ಬ ಹುಡುಗ ಹೋರಾಟ ಮಾಡಿದ ಕಥೆ ಈ ಸಿನಿಮಾದಲ್ಲಿದೆ. ದೇವರಾಜ್ ನಿರ್ಮಾಪಕರಾಗಿದ್ದು ಸತ್ಯ ಹೆಗ್ಡೆ ಸಹ ನಿರ್ಮಾಪಕರಾಗಿದ್ದಾರೆ. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಅವರು ತಿಳಿಸಿದ್ದಾರೆ.
ಹಂಸಲೇಖ ಅವರೂ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದಲ್ಲಿ ಯಾರ್ಯಾರಿದ್ದಾರೆ?
ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದು, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ.

ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.
Manso re Next Movie to be Released in March Story based on True Incidents Happened in Coastal Karnataka.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm