ಬ್ರೇಕಿಂಗ್ ನ್ಯೂಸ್
16-03-23 01:07 pm Source: news18 ಸಿನಿಮಾ
ಡಿವೈನ್ ಸ್ಟಾರ್ ರಿಷಬ್ ಶೆಟ್ರ ಖ್ಯಾತಿ ದೇಶ ವಿದೇಶದಲ್ಲಿ ಮಾತ್ರ ಇತ್ತು. ಈಗ ಇದೇ ಕಾಂತಾರ ರಿಷಬ್ ಶೆಟ್ರ ಖ್ಯಾತಿ ವಿಶ್ವ ಸಂಸ್ಥೆಗೂ ತಲುಪಿದೆ ನೋಡಿ. ತಮ್ಮ ಚಿತ್ರದ ಮೂಲಕ ಕಾಡಂಚಿನ ಜನರ ಸಮಸ್ಯೆಯನ್ನ ಹೇಳಿದ್ದ ಶೆಟ್ರು ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ. ಕಾಂತಾರ ಚಿತ್ರದ ಮೂಲಕ ರಿಷಬ್ ಶೆಟ್ರು ಕಾಡಂಚಿನ ಜನರ ಕಷ್ಟವನ್ನ ಹೇಳಿದ್ದಾರೆ. ಮೊನ್ನೆ ಮೊನ್ನೆ ರಿಷಬ್ ಶೆಟ್ರು ಈ ಸಮಸ್ಯೆಗಳನ್ನ ಅರ್ಥ ಮಾಡಿಕೊಂಡಿದ್ದಾರೆ. ಸಿಎಂ. ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿಯಾಗಿ ಕಾಡಂಚಿನ ಸಮಸ್ಯೆಗಳನ್ನ ವಿವರವಾಗಿಯೇ ಹೇಳಿದ್ದಾರೆ.
ಕಾಂತಾರ ಸಿನಿಮಾದ ಖ್ಯಾತಿ ಎಲ್ಲೆಡೆ ಇದ್ದು ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ರು ಭಾಗಿ ಆಗುತ್ತಿದ್ದಾರೆ. ಇಲ್ಲಿ ಕಾಡಂಚಿನ ಸಮಸ್ಯೆಗಳನ್ನ ಕೂಡ ರಿಷಬ್ ಶೆಟ್ರು ಚರ್ಚೆ ಮಾಡಲಿದ್ದಾರೆ ಅನ್ನುವ ಮಾಹಿತಿನೂ ಇದೆ. ಜಿನಿವಾದಲ್ಲಿ ನಡೆಯುತ್ತಿರೋ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ರು ಕನ್ನಡದಲ್ಲಿಯೇ ಮಾತನಾಡಲಿದ್ದಾರೆ. ಕಾಡಂಚಿನ ಜನರ ಸಮಸ್ಯೆಯನ್ನ ಇಲ್ಲಿ ವಿವರವಾಗಿ ಹೇಳಿದ್ದಾರೆ ಅನ್ನುವ ಸುದ್ದಿನೂ ಇದೆ.



ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ವಿಶ್ವದ ಹಲವು ದೇಶದ ಪ್ರತಿನಿಧಿಗಳು ಭಾಗಿ ಆಗುತ್ತಿದ್ದಾರೆ. ಈ ನಿಟ್ಟಿನಲ್ಲಿ ರಿಷಬ್ ಶೆಟ್ರು ಕೂಡ ಭಾಗಿ ಆಗುತ್ತಿದ್ದಾರೆ. ಸಿನಿಮಾ ಮೂಲಕ ಪರಿಸರ ಮತ್ತು ಅರಣ್ಯದಂಚಿನಲ್ಲಿರೋ ಜನರ ಸಮಸ್ಯೆಗಳನ್ನೂ ರಿಷಬ್ ತೋರಿದ್ದಾರೆ. ಅದೇ ವಿಷಯವನ್ನ ರಿಷಬ್ ಇಲ್ಲೂ ಮಾತನಾಡಲಿದ್ದಾರೆ ಅನ್ನೋದು ಈಗಿನ ಮಾಹಿತಿ. ಸ್ವಿಜರ್ಲ್ಯಾಂಡ್ ಜಿನಿವಾದಲ್ಲಿ ನಡೆಯುತ್ತಿರೋ ವಿಶ್ವ ಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಕನ್ನಡದ ರಿಷಬ್ ಶೆಟ್ರು ಭಾಗಿ ಆಗುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ. ಬಿಜೆಪಿ ಕರ್ನಾಟಕ ಟ್ವಿಟರ್ ಅಕೌಂಟ್ ಪೇಜ್ನಲ್ಲಿ ಅಧಿಕೃತವಾಗಿಯೇ ಮೊನ್ನೆ 13 ರಂದು ಈ ವಿಷಯ ತಿಳಿಸಿದೆ.



ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಬ್ ಶೆಟ್ರು ಇಲ್ಲಿ ಇನ್ನೂ ಒಂದು ಕೆಲಸ ಮಾಡಲಿದ್ದಾರೆ. ತಮ್ಮ ಕಾಂತಾರ ಚಿತ್ರವನ್ನ ಇಲ್ಲಿ ವಿವಿಧ ದೇಶದ ಪ್ರತಿನಿಧಿಗಳ ಜೊತೆಗೆ ವೀಕ್ಷಿಸಲಿದ್ದಾರೆ. ಅಪ್ಪು ಜನ್ಮ ದಿನ ಮಾರ್ಚ್-17 ರಂದು ಕಾಂತಾರ ಸಿನಿಮಾ ಇಲ್ಲಿ ಪ್ರದರ್ಶನ ಆಗುತ್ತದೆ ಅನ್ನು ಸುದ್ದಿನೂ ಇದೆ.
kannada devine star rishab shetty latest updates kantara special show in america.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm