ಬ್ರೇಕಿಂಗ್ ನ್ಯೂಸ್
24-10-20 09:45 am Headline Karnataka News Network ಸಿನಿಮಾ
ಮೈಸೂರು,ಅಕ್ಟೋಬರ್.24 : ಬಂಡೀಪುರದಲ್ಲಿ ತಡ ರಾತ್ರಿ ಸಫಾರಿ ಮಾಡಿದ್ದಕ್ಕಾಗಿ ಸ್ಯಾಂಡಲ್ ವುಡ್ ನಟ ಧನ್ವೀರ್ ಮೊದಲ ಬಾರಿ ವಿವಾದಲ್ಲಿ ಸಿಲುಕಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ನಟ ಧನ್ವೀರ್ ಬಂಡೀಪುರಕ್ಕೆ ರಾತ್ರಿ ಭೇಟಿ ನೀಡಿ ಸಫಾರಿ ಮಾಡಿ, ಹುಲಿ ನೋಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದರು.

ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸುವುದು ಕಾನೂನು ಬಾಹಿರವಾಗಿದ್ದು ಸದ್ಯ ಈ ಪೋಸ್ಟ್ಗೆ ವಿರೋಧ ವ್ಯಕ್ತವಾಗಿದೆ.ಸಾಮಾನ್ಯರಿಗೆ ಸಫಾರಿಗೆ ರಾತ್ರಿ ಅವಕಾಶವಿಲ್ಲದಿದ್ದರೂ ನಟ ಧನ್ವೀರ್ ರಾತ್ರಿ ಸಫಾರಿ ನಡೆಸಿರುವುದು ಕಾನೂನು ಬಾಹಿರವೆಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಕುರಿತಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಧನ್ವೀರ್ ಅವರ ಸಫಾರಿ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮ್ಮ ವಿವಾದದ ಕುರಿತು ನಟ ಧನ್ವೀರ್ ಸ್ಪಷ್ಟನೆ ನೀಡಿದ್ದು, ಅರಣ್ಯ ಇಲಾಖೆಯ ಸಂಜೆ 4.30 ರಿಂದ 6.30ರಂದು ನಡೆಸುವ ಕೊನೆಯ ಸಫಾರಿಯಾಗಿದೆ. ಕಾಡಾಗಿರುವುದರಿಂದ ಕತ್ತಲು ದಟ್ಟವಾಗಿ ಕಾಣುತ್ತಿದೆ.ರಾತ್ರಿ ಸಫಾರಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇಡೀ ಕಾಡು ಸುತ್ತಾಡಿದ್ರೂ ನೋಡೊದಿಕ್ಕೆ ಏನೂ ಸಿಗಲಿಲ್ಲ. ಕೊನೆಯಲ್ಲಿ 6.31ಕ್ಕೆ ಒಂದು ಹುಲಿ ನಮ್ಮ ವಾಹನದ ಮುಂದೆ ನಡೆದುಕೊಂಡು ಹೋಯ್ತು. ಅದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ, ಆದರೆ ಯಾಕೆ ಇಷ್ಟು ತೊಂದರೆ ಆಯ್ತು ಅಂತ ಅರ್ಥ ಆಗುತ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಅಧಿಕಾರಿ ಬಾಲಚಂದ್ರ ಪ್ರತಿಕ್ರೀಯೆ ನೀಡಿದ್ದು ಬಂಡೀಪುರದಲ್ಲಿ ನಟನಿಗೆ ನೈಟ್ ಸಫಾರಿಗೆ ಅವಕಾಶ ಕೊಟ್ಟಿಲ್ಲ. ಒಂದು ವೇಳೆ ಸಫಾರಿ ಮಾಡಿರೋದು ಕಂಡುಬಂದ್ರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm