ಬ್ರೇಕಿಂಗ್ ನ್ಯೂಸ್
20-03-23 12:30 pm Source: news18 ಸಿನಿಮಾ
ಉರಿಗೌಡ-ನಂಜೇಗೌಡ (Urigowda Nanjegowda) ಅವರನ್ನು ಆಧರಿಸಿದ ಸಿನಿಮಾ ಮಾಡಲು ನಿರ್ಮಾಪಕ, ಹಾಲಿ ಸಚಿವ ಮುನಿರತ್ನ (Munirathna) ಫಿಲ್ಮ್ ಚೇಂಬರ್ನಲ್ಲಿ ಟೈಟಲ್ ರಿಜಿಸ್ಟರ್ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಟ್ವೀಟ್ ಮಾಡಿದ್ದ ಮುನಿರತ್ನ ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದು ಪೋಸ್ಟ್ ಮಾಡಿದ್ದರು.
ನಿರ್ಮಾಪಕ ಮುನಿರತ್ನ ಟ್ವೀಟ್
ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಚಿವ ಮುನಿರತ್ನ ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಚರ್ಚೆ
ಉರಿಗೌಡ ದೊಡ್ಡನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಮುನಿರತ್ನ ಹಿಂದೆ ಸರಿಯಲು ಕಾರಣ ಏನು ಎನ್ನುವ ಪ್ರಶ್ನೆ ಇದೀಗ ಮೂಡಿದೆ. ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ಬಳಿಕ ಮುನಿರತ್ನ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗ್ತಿದೆ. ಇನ್ನು ಈ ಮುನಿರತ್ನ ಅವರೇ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ನಾನು ಪೋಸ್ಟ್ ಹಂಚಿಕೊಂಡಿದ್ದೆ. ಮೇ 18ಕ್ಕೆ ಚಿತ್ರ ಮಾಡಲು ನಿರ್ಧರಿಸಿದ್ದೆ ಎಂದ್ರು.
ಯಾರ ಮನಸ್ಸಿಗೂ ನೋವುಂಟು ಮಾಡುವ ಸಿನಿಮಾ ಮಾಡಲ್ಲ
ಕುರುಕ್ಷೇತ್ರ ಸಿನಿಮಾ ಬಳಿಕ ದೊಡ್ಡ ಮಟ್ಟದ ಪೌರಾಣಿಕ ಚಿತ್ರ ಮಾಡಲು ನಿರ್ಧಾರ ಮಾಡಿದ್ದೆ. ಕುಮಾರಸ್ವಾಮಿ, ಅಶ್ವಥ್ ನಾರಾಯಣ್ ಸಿನಿಮಾ ಮಾಡಲು ಮುನಿರತ್ನಗೆ ಹೇಳಿರಬೇಕು ಅಂತ ಅನೇಕರು ಹೇಳಿದೆ. ನಾನು ಈ ಸಿನಿಮಾ ಮಾಡಲು ಮುಂದಾಗಿದೆ. ಈ ವೇಳೆ ಚಿತ್ರ ಮಾಡಲು ಸ್ವಾಮೀಜಿ ಜೊತೆ ಚೆರ್ಚೆ ಮಾಡಿದೆ. ಚರ್ಚೆ ಬಳಿಕ ಬೇರೆಯವ್ರ ಮನಸ್ಸಿಗೆ ನೋವು ಮಾಡೋದು ಬೇಡ ಅಂತ ಅಂದ್ಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.
ನಾನು ಬೇರೆ ಕಥೆ ಹುಡುಕಿಕೊಳ್ಳುವೆ
ಯಾರಿಗೂ ನೋವುಂಟು ಮಾಡುವ ಸಿನಿಮಾ ಮಾಡಲ್ಲ ಎಂದು ಸ್ವಾಮಿಜಿಗೆ ಹೇಳಿದ್ದೇನೆ. ನಾನು ಬೇರೆ ಕಥೆ ಹುಡುಕಿಕೊಳ್ತಿನಿ. ಈ ಸಿನಿಮಾ ಬಗ್ಗೆ ನಾನು ಇನ್ಮುಂದೆ ಯಾವುದೇ ಕಾರಣಕ್ಕೂ ಮಾತಾಡಲ್ಲ. ಶ್ರೀಗಳು ನೈಜತೆ ಬಗ್ಗೆ ನೋಡಿ ಸಿನಿಮಾ ಮಾಡಿ ಎಂದಿದ್ದಾರೆ. ಹೀಗಾಗಿ ಉರಿಗೌಡ ನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.
ರಾಜ್ಯದಲ್ಲಿ ಉರಿಗೌಡ-ನಂಜೇಗೌಡ ಬಗ್ಗೆ ಭಾರೀ ಚರ್ಚೆ ಆಗ್ತಿದ್ದು, ರಾಜಕೀಯ ರಂಗೇರಿದೆ. ಇಬ್ಬರ ಬಗ್ಗೆ ಪರ-ವಿರೋಧ ಚರ್ಚೆಗಳು ಜೋರಾಗಿದೆ. ಈ ವಿವಾದದ ಕಿಚ್ಚಿಗೆ ಬಿಸಿ ತುಪ್ಪ ಸುರಿಯಲು ಮುಂದಾಗಿದ್ದ ಮುನಿರತ್ನ ಇದೀಗ ತಣ್ಣಗಾಗಿದ್ದಾರೆ.
urigowda nanjegowda movie plan has been dropped by munirathna.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm