ಬ್ರೇಕಿಂಗ್ ನ್ಯೂಸ್
20-03-23 12:30 pm Source: news18 ಸಿನಿಮಾ
ಉರಿಗೌಡ-ನಂಜೇಗೌಡ (Urigowda Nanjegowda) ಅವರನ್ನು ಆಧರಿಸಿದ ಸಿನಿಮಾ ಮಾಡಲು ನಿರ್ಮಾಪಕ, ಹಾಲಿ ಸಚಿವ ಮುನಿರತ್ನ (Munirathna) ಫಿಲ್ಮ್ ಚೇಂಬರ್ನಲ್ಲಿ ಟೈಟಲ್ ರಿಜಿಸ್ಟರ್ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಟ್ವೀಟ್ ಮಾಡಿದ್ದ ಮುನಿರತ್ನ ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದು ಪೋಸ್ಟ್ ಮಾಡಿದ್ದರು.
ನಿರ್ಮಾಪಕ ಮುನಿರತ್ನ ಟ್ವೀಟ್
ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಚಿವ ಮುನಿರತ್ನ ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಚರ್ಚೆ
ಉರಿಗೌಡ ದೊಡ್ಡನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಮುನಿರತ್ನ ಹಿಂದೆ ಸರಿಯಲು ಕಾರಣ ಏನು ಎನ್ನುವ ಪ್ರಶ್ನೆ ಇದೀಗ ಮೂಡಿದೆ. ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ಬಳಿಕ ಮುನಿರತ್ನ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗ್ತಿದೆ. ಇನ್ನು ಈ ಮುನಿರತ್ನ ಅವರೇ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ನಾನು ಪೋಸ್ಟ್ ಹಂಚಿಕೊಂಡಿದ್ದೆ. ಮೇ 18ಕ್ಕೆ ಚಿತ್ರ ಮಾಡಲು ನಿರ್ಧರಿಸಿದ್ದೆ ಎಂದ್ರು.
ಯಾರ ಮನಸ್ಸಿಗೂ ನೋವುಂಟು ಮಾಡುವ ಸಿನಿಮಾ ಮಾಡಲ್ಲ
ಕುರುಕ್ಷೇತ್ರ ಸಿನಿಮಾ ಬಳಿಕ ದೊಡ್ಡ ಮಟ್ಟದ ಪೌರಾಣಿಕ ಚಿತ್ರ ಮಾಡಲು ನಿರ್ಧಾರ ಮಾಡಿದ್ದೆ. ಕುಮಾರಸ್ವಾಮಿ, ಅಶ್ವಥ್ ನಾರಾಯಣ್ ಸಿನಿಮಾ ಮಾಡಲು ಮುನಿರತ್ನಗೆ ಹೇಳಿರಬೇಕು ಅಂತ ಅನೇಕರು ಹೇಳಿದೆ. ನಾನು ಈ ಸಿನಿಮಾ ಮಾಡಲು ಮುಂದಾಗಿದೆ. ಈ ವೇಳೆ ಚಿತ್ರ ಮಾಡಲು ಸ್ವಾಮೀಜಿ ಜೊತೆ ಚೆರ್ಚೆ ಮಾಡಿದೆ. ಚರ್ಚೆ ಬಳಿಕ ಬೇರೆಯವ್ರ ಮನಸ್ಸಿಗೆ ನೋವು ಮಾಡೋದು ಬೇಡ ಅಂತ ಅಂದ್ಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.
ನಾನು ಬೇರೆ ಕಥೆ ಹುಡುಕಿಕೊಳ್ಳುವೆ
ಯಾರಿಗೂ ನೋವುಂಟು ಮಾಡುವ ಸಿನಿಮಾ ಮಾಡಲ್ಲ ಎಂದು ಸ್ವಾಮಿಜಿಗೆ ಹೇಳಿದ್ದೇನೆ. ನಾನು ಬೇರೆ ಕಥೆ ಹುಡುಕಿಕೊಳ್ತಿನಿ. ಈ ಸಿನಿಮಾ ಬಗ್ಗೆ ನಾನು ಇನ್ಮುಂದೆ ಯಾವುದೇ ಕಾರಣಕ್ಕೂ ಮಾತಾಡಲ್ಲ. ಶ್ರೀಗಳು ನೈಜತೆ ಬಗ್ಗೆ ನೋಡಿ ಸಿನಿಮಾ ಮಾಡಿ ಎಂದಿದ್ದಾರೆ. ಹೀಗಾಗಿ ಉರಿಗೌಡ ನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.
ರಾಜ್ಯದಲ್ಲಿ ಉರಿಗೌಡ-ನಂಜೇಗೌಡ ಬಗ್ಗೆ ಭಾರೀ ಚರ್ಚೆ ಆಗ್ತಿದ್ದು, ರಾಜಕೀಯ ರಂಗೇರಿದೆ. ಇಬ್ಬರ ಬಗ್ಗೆ ಪರ-ವಿರೋಧ ಚರ್ಚೆಗಳು ಜೋರಾಗಿದೆ. ಈ ವಿವಾದದ ಕಿಚ್ಚಿಗೆ ಬಿಸಿ ತುಪ್ಪ ಸುರಿಯಲು ಮುಂದಾಗಿದ್ದ ಮುನಿರತ್ನ ಇದೀಗ ತಣ್ಣಗಾಗಿದ್ದಾರೆ.
urigowda nanjegowda movie plan has been dropped by munirathna.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm