ಬ್ರೇಕಿಂಗ್ ನ್ಯೂಸ್
28-03-23 02:30 pm Source: news18 ಸಿನಿಮಾ
ನಯನತಾರಾ ಸೌತ್ ಇಂಡಸ್ಟ್ರಿಯಲ್ಲಿ ದಶಕಗಳಿಂದ ಮಿಂಚಿತ್ತಿರುವ ನಟಿ. ಟಾಲಿವುಡ್, ಕಾಲಿವುಡ್, ಸ್ಯಾಂಡಲ್ವುಡ್ ಸಿನಿಮಾಗಳಲ್ಲಿ ಅಭಿನಯಿಸಿರುವ ನಯನತಾರಾಗೆ ಅಪಾರ ಅಭಿಮಾನಿ ಬಳಗ ಇದೆ. ನಯನತಾರಾ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ನಯನತಾರಾ ಸದ್ಯ ಬಾಲಿವುಡ್ಗೆ ಎಂಟ್ರಿ ಕೊಡ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಕಿಂಗ್ ಖಾನ್ ಶಾರುಖ್ ಜೊತೆ ನಟಿಸುವ ಅವಕಾಶ ನಯನತಾರಾಗೆ ಸಿಕ್ಕಿದ್ದು, ನಟಿ ಕೂಡ ಫುಲ್ ಖುಷ್ ಆಗಿದ್ದಾರೆ. ಶಾರುಖ್ ಖಾನ್ ಜೊತೆ ನಟಿ ಒಳ್ಳೆಯ ಸ್ನೇಹ ಕೂಡ ಹೊಂದಿದ್ದಾರೆ.


ನಿರ್ದೇಶಕ ಅಟ್ಲಿ ಅವರ 'ಜವಾನ್' ಚಿತ್ರದಲ್ಲಿ ನಯನತಾರಾ ಮತ್ತು ಶಾರುಖ್ ಖಾನ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಈ ಜೋಡಿಯನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಈ ನಡುವೆ ನಯನತಾರಾ ಬಗ್ಗೆ ಒಂದು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಕೆಲ ವರ್ಷಗಳಿಂದ ನಯನತಾರಾ ನಟಿಗೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ನಯನತಾರಾ ತಮ್ಮ ಬಾಲಿವುಡ್ ಚೊಚ್ಚಲ ಚಿತ್ರಕ್ಕಾಗಿ ದೊಡ್ಡ ಹೆಜ್ಜೆ ಇಡುತ್ತಿದ್ದಾರೆ.


ಸೌತ್ ನಟಿ ನಯನತಾರಾ, ಶಾರುಖ್ ಖಾನ್ ಅವರ ಚಿತ್ರಕ್ಕಾಗಿ ತಾವು 16 ವರ್ಷಗಳಿಂದ ಮಾಡಿಕೊಂಡಿದ್ದ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರಂತೆ. ಬಾಲಿವುಡ್ ಸಿನಿಮಾಗಳಲ್ಲಿ ನಟಿಯರು ಹೆಚ್ಚಾಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ತಾರೆ. ಜವಾನ್ ಸಿನಿಮಾದಲ್ಲಿ ನಟಿ ನಯನತಾರಾ ಕೂಡ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾದಲ್ಲಿ ನಯನತಾರಾ ಬಿಕಿನಿ ತೊಡಲಿದ್ದಾರೆ ಎನ್ನಲಾಗಿದೆ. ಸಿನಿಮಾಗಾಗಿ ಬಿಕಿನಿ ತೊಡಲು ನಟಿ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.


ಶಾರುಖ್ ಅಭಿನಯದ ಇತ್ತೀಚಿನ ಸಿನಿಮಾ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ತೊಟ್ಟು ದೀಪಿಕಾ ಪಡುಕೋಣೆ ದೊಡ್ಡ ವಿವಾದಕ್ಕೆ ಸಿಲುಕಿದ್ರು. ಇದೀಗ ಮತ್ತೆ ಶಾರುಖ್ ಸಿನಿಮಾದಲ್ಲಿ ನಯನತಾರಾ ಬಿಕಿನಿ ತೊಡಲು ರೆಡಿಯಾಗಿದ್ದಾರೆ. ನಯನತಾರಾ ಕೂಡ ತುಂಬಾ ಯೋಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಮದುವೆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಯನತಾರಾ ಬ್ಯುಸಿ ಆಗಿದ್ದಾರೆ. ನಟಿ ಕೂಡ ಶಾರುಖ್ ಜೊತೆಗಿನ ಜವಾನ್ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದಾರೆ.
nayanthara will break her 16 year rule for shahrukh khan film wear bikini.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm