ಬ್ರೇಕಿಂಗ್ ನ್ಯೂಸ್
            
                        26-10-20 02:06 pm Headline Karnataka News Network ಸಿನಿಮಾ
            ಅಲಹಾಬಾದ್, ಅಕ್ಟೋಬರ್.26 : ಲೈಂಗಿಕ ಹಿಂಸೆ, ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಕಿಗೆ ಸದ್ಯ ಅಲಹಾಬಾದ್ ಹೈಕೋರ್ಟ್ ಆತನ ಬಂಧನಕ್ಕೆ ತಡೆ ನೀಡಿದೆ.
ನವಾಜುದ್ಧಿನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ ಕೆಲವು ದಿನಗಳ ಹಿಂದೆ ನವಾಜುದ್ಧೀನ್ ಸಿದ್ಧಿಕಿ ಹಾಗೂ ಅವರ ಕುಟುಂಬದ ಮೂವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಲೈಂಗಿಕ ಹಿಂಸೆಯ ದೂರು ನೀಡಿದ್ದರು. ದೂರಿನ ಮೇರೆಗೆ ಎಫ್ ಐ ಆರ್ ಕೂಡ ದಾಖಲಾಗಿದ್ದು ನವಾಜುದ್ಧೀನ್ ನನ್ನು ಬಂಧಿಸಲು ಸಹ ಪೊಲೀಸರು ತಯಾರಾಗಿದ್ದರು.

ಆದರೆ ತಮ್ಮ ವಿರುದ್ಧದ ಪ್ರಕರಣದ ಕುರಿತು ನವಾಜುದ್ಧೀನ್ ಸಿದ್ಧಿಕಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನವಾಜುದ್ಧೀನ್ ಸಿದ್ಧಿಕಿ ಸೇರಿ ಮೂವರನ್ನು ಬಂಧಿಸದಂತೆ ತಡೆ ನೀಡಿದೆ.

ನವಾಜುದ್ಧೀನ್ ಸಿದ್ಧಿಕಿ, ಮಿನಾಜುದ್ಧೀನ್ ಸಿದ್ಧಿಕಿ, ಫೈಜುದ್ಧೀನ್ ಸಿದ್ಧಿಕಿ, ಮೆಹರುನ್ನೀಸಾ ಸಿದ್ಧಿಕಿ, ಅಯಾಜುದ್ಧೀನ್ ಸಿದ್ಧಿಕಿ ವಿರುದ್ಧ ನವಾಜುದ್ದೀನ್ ಪತ್ನಿ ಆಲಿಯಾ ಸಿದ್ಧಿಕಿ ದೂರು ನೀಡಿದ್ದರು. ಎಲ್ಲರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್, ಮಿನಾಜುದ್ಧೀನ್ ಸಿದ್ಧಿಕಿ ಬಂಧನಕ್ಕೆ ಮಾತ್ರ ತಡೆ ನೀಡಿಲ್ಲ. ಮಿನಾಜುದ್ಧೀನ್ ಸಿದ್ಧಿಕಿ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಹಿಂಸೆ ಪ್ರಕರಣ ದಾಖಲಾಗಿರುವುದರಿಂದ ತ್ರಿಸದಸ್ಯ ಪೀಠವು ಮಿನಾಜುದ್ಧೀನ್ ಬಂಧನಕ್ಕೆ ತಡೆ ನೀಡಿಲ್ಲ. ಇದು ನವಾಜುದ್ಧೀನ್ಗೆ ತಾತ್ಕಾಲಿಕ ನಿರಾಳ ಮಾತ್ರವೇ ಆಗಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm