ಬ್ರೇಕಿಂಗ್ ನ್ಯೂಸ್
26-04-23 01:31 pm Source: news18 ಸಿನಿಮಾ
ನಟಿ ತಾರಾಅನುರಾಧ ಮೇಲೆ ಎಫ್ಐಆರ್ ದಾಖಲಾಗಿದೆ. ಸರಕಾರಿ ಕಾರನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಆರೋಪದಲ್ಲಿ ನಟಿಯ ವಿರುದ್ಧ ಕೇಸ್ ದಾಖಲಾಗಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ನಟಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಆಧರಿಸಿ ಫ್ಲೈಯಿಂಗ್ ಸ್ವ್ಕಾಡ್ ದೂರು ದಾಖಲಿಸಿದೆ.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ನಟಿ ತಾರಾ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದರು.

ತಾರಾ ಅವರು ಸಿನಿಮಾ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ. ಸದ್ಯ ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ ತಾರಾ. ನಟಿ ತಾರಾ ಖಾಸಗಿ ವಾಹಿನಿ ರಿಯಾಲಿಟಿ ಶೋ ರಾಜಾರಾಣಿ, ನಮ್ಮಮ್ಮ ಸೂಪರ್ಸ್ಟಾರ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿದ್ದರು. ಈ ಮೂಲಕ ಪ್ರೇಕ್ಷಕರ ಮನಸು ಗೆದ್ದಿದ್ದರು. ನಟಿ ತಾರಾ ಅವರು ಸಿನಿಮಾ, ರಾಜಕೀಯ, ರಿಯಾಲಿಟಿ ಶೋ ಮಾತ್ರವಲ್ಲದೆ ಪರ್ಸನಲ್ ಲೈಫ್ಗೂ ಸ್ಪೇಸ್ ಕೊಡುವ ವ್ಯಕ್ತಿ. ಅವರು ತಮ್ಮ ಸ್ನೇಹಿತೆಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರನ್ನು ಆಗಾಗ ಭೇಟಿಯಾಗುತ್ತಿರುತ್ತಾರೆ.
fir filed against actress tara updates here.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm