ಬ್ರೇಕಿಂಗ್ ನ್ಯೂಸ್
16-05-23 12:12 pm Source: news18 ಸಿನಿಮಾ
ಸಮಂತಾ ನಂತರ ನಾಗ ಚೈತನ್ಯ ಕೂಡ ಹಿನ್ನಡೆ ಅನುಭವಿಸಿದ್ದಾರೆ. ನಟನ ಇತ್ತೀಚಿನ ಚಿತ್ರ ಕಸ್ಟಡಿ ನಿರೀಕ್ಷೆಯಂತೆ ಪ್ರದರ್ಶನ ನೀಡಲು ವಿಫಲವಾಗಿದೆ. ಗಲ್ಲಾಪೆಟ್ಟಿಗೆಯಲ್ಲೂ ನಿರಾಶೆ ಮೂಡಿಸಿದೆ. ಕಸ್ಟಡಿ ಚಿತ್ರವನ್ನು ಚೊಚ್ಚಲ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶಿಸಿದ್ದಾರೆ. ನಾಗ ಚೈತನ್ಯ ಅವರ ಹೊಸ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ, ನಟನ ಚಿತ್ರ ನಿರೀಕ್ಷೆಯಂತಿಲ್ಲ ಎಂದು ಹೇಳಲಾಗ್ತಿದೆ.
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲಿ ಹಿನ್ನೆಡೆಯನ್ನು ಎದುರಿಸಿತು. ಮೊದಲ ವಾರದ ನಂತರ, ಕೇವಲ 8.6 ಕೋಟಿ ಕಲೆಕ್ಷನ್ ಮಾಡಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರವಿಂದ್ ಸ್ವಾಮಿ, ಶರತ್ ಕುಮಾರ್, ಕೀರ್ತಿ ಶೆಟ್ಟಿ, ಪ್ರಿಯಾಮಣಿ, ಪ್ರೇಮ್ಜಿ, ವೆನ್ನಲ ಕಿಶೋರ್ ಮತ್ತು ಸಂಪತ್ ರಾಜ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಇತ್ತೀಚೆಗಷ್ಟೇ ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ಸಿನಿಮಾ ಶಾಕುಂತಲಂ ದೊಡ್ಡ ಫ್ಲಾಪ್ ಆಗಿತ್ತು. ಇದಾದ ನಂತರ ನಾಗ ಚೈತನ್ಯ ಅವರ ಚಿತ್ರವೂ ಸೋಲು ಕಂಡಿದ್ದು, ವಿಚ್ಛೇದನ ಬಳಿಕ ಇಬ್ಬರ ಲಕ್ ಬದಲಾಗಿ ಹೋಗಿದೆ. ತೆಲುಗು ಅಲ್ಲದೆ ತಮಿಳಿನಲ್ಲೂ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ತಮಿಳಿನಲ್ಲಿ ನಾಗ ಚೈತನ್ಯ ಅವರ ಚೊಚ್ಚಲ ಚಿತ್ರವೂ ಆಗಿತ್ತು. ನಟ ನಾಗ ಚೈತನ್ಯ ಅವರೇ ಸ್ವತಃ ಡಬ್ಬಿಂಗ್ ಮಾಡಿದ್ದಾರೆ.

ಈ ಚಿತ್ರವು ಮೊದಲ ದಿನ ಎರಡೂ ತೆಲುಗು ರಾಜ್ಯಗಳಲ್ಲಿ ಒಟ್ಟು 1.82 ಕೋಟಿ ಕಲೆಕ್ಷನ್ ಮಾಡಿದೆ. ಎರಡನೇ ದಿನದಲ್ಲಿ 80 ಲಕ್ಷ ಮತ್ತು ಭಾನುವಾರದಂದು 78 ಲಕ್ಷಗಳನ್ನು ಸಂಗ್ರಹಿಸಿದೆ. ಒಟ್ಟಾರೆಯಾಗಿ, ಕಸ್ಟಡಿ ಈ 3 ದಿನಗಳಲ್ಲಿ 3.40 Cr ನಿವ್ವಳ ಮತ್ತು 6.25 Cr~ ಗ್ರಾಸ್ ಸಂಗ್ರಹಿಸಿದೆ.
naga chaitanya custody disappoints at box office.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm