ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.
ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.
ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm