ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm