ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm