ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm