ಬ್ರೇಕಿಂಗ್ ನ್ಯೂಸ್
06-06-23 01:19 pm Source: news18 ಸಿನಿಮಾ
ಜೂನ್ 15ಕ್ಕೆ SSE ಸಿನಿಮಾ ರಿಲೀಸ್ ಡೇಟ್ ಅನೌನ್ಸ್
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ. ಪ್ರತಿ ಬಾರಿ ಹೊಸತನದೊಂದಿಗೆ ತೆರೆ ಮೇಲೆ ಬರುವ ರಕ್ಷಿತ್ ಶೆಟ್ಟಿ, ಈ ಬಾರಿ ಕೂಡ ಮ್ಯಾಜಿಕ್ ಮಾಡಲಿದ್ದಾರೆ ಎನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಜನ್ಮದಿನದಂದು ರಕ್ಷಿತ್ ಶೆಟ್ಟಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಜೂನ್ 15 ರಂದು ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 ಪಾರ್ಟ್ಗಳಾಗಿ ತೆರೆ ಮೇಲೆ ಬರಲಿದೆ SSE
ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಮಾ ಬಗ್ಗೆ ಮಾಹಿತಿ ನೀಡಿದ ರಕ್ಷಿತ್ ಶೆಟ್ಟಿ, ನಿಮ್ಮ ಮನು ಇಂದು ಸ್ಪೆಷಲ್ ಅನೌನ್ಸ್ಮೆಂಟ್ ಮಾಡಲು ಬಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಸಮಯ, ಪ್ರೀತಿ ಮತ್ತು ಕನಸುಗಳನ್ನು ಸ್ಪಷ್ಟವಾಗಿ ಕೆತ್ತಿದ ಎಸ್ಎಸ್ಇ ಈಗ ಎರಡು ಭಾಗಗಳಲ್ಲಿ ನಿಮ್ಮ ಮುಂದೆ ಬರಲಿದೆ , ಸೈಡ್ ಎ ಮತ್ತು ಸೈಡ್ ಬಿ ಚಿತ್ರೀಕರಣ ಮುಗಿದಿದೆ. ಈ ಸಿನಿಮಾದ ಎರಡೂ ಭಾಗಗಳ ಬಿಡುಗಡೆ ದಿನಾಂಕವನ್ನು ಜೂನ್ 15 ರಂದು ಪ್ರಕಟಿಸಲಾಗುವುದು. ನೀವು ನಮ್ಮನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದು ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.

ಮನು-ಸುರಭಿ ಪ್ರೇಮಕಥೆ
ಸಪ್ತ ಸಾಗರದಾಚೆ ಸಿನಿಮಾ ಟೀಸರ್ ರಿಲೀಸ್ ಆಗಿದ್ದು, ಟೀಸರ್ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೇಮಿಗಳ ದಿನದಂದು 36 ಸೆಕೆಂಡ್ ಇರುವ ಈ ಟೀಸರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಟೀಸರ್ನಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಾತ್ರ ಕಾಣಿಸಿಕೊಂಡಿದ್ದರು. ಮನು-ಸುರಭಿ ಪ್ರೇಮ ಕಥೆಯ ಝಲಕ್ ಅನ್ನು ಟೀಸರ್ ನಲ್ಲಿ ಕಾಣಬಹುದಾಗಿದೆ. ಟೀಸರ್ ನೋಡಿದ ಪ್ರೇಕ್ಷಕರಿಗೆ ರಕ್ಷಿತ್ ಸಿನಿಮಾ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ.

ಮೋಡಿ ಮಾಡುತ್ತಾ ರಕ್ಷಿತ್-ರುಕ್ಮಿಣಿ ಜೋಡಿ?
ನಿರ್ದೇಶಕ ಹೇಮಂತ್ ರಾವ್ ಮತ್ತು ರಕ್ಷಿತ್ ಶೆಟ್ಟಿ ಕಾಂಬಿನೇಷನ್ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ತಯಾರಾಗ್ತಿದೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ 'ಮನು' ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ರುಕ್ಮಿಣಿ ವಸಂತ್ ಸುರಭಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಹೆಸರೇ ಹೇಳುವಂತೆ ಸಮುದ್ರ ಕೂಡ ಈ ಚಿತ್ರದಲ್ಲಿ ಮುಖ್ಯ ಪಾತ್ರವಹಿಸಲಿದೆ ಎನ್ನಬಹುದು. ಸಿನಿಮಾ ತಂಡ ರಿಲೀಸ್ ಮಾಡಿರುವ 2 ಟೀಸರ್ಗಳಲ್ಲೂ ಸಮುದ್ರದ ಬಗ್ಗೆ ಮಾತುಕತೆ ಇದೆ.
actor rakshit shetty sapta sagaradaache ello movie big update.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm