ಬ್ರೇಕಿಂಗ್ ನ್ಯೂಸ್
07-06-23 01:42 pm Source: news18 ಸಿನಿಮಾ
ಇದೇ ಮೊದಲ ಬಾರಿಗೆ ಆದಿಪುರುಷ್ ಸಿನಿಮಾ ತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅದೇನೆಂದರೆ ಆದಿಪುರುಷ್ ಸಿನಿಮಾ ರಿಲೀಸ್ ಆಗುವ ಪ್ರತಿ ಚಿತ್ರಮಂದಿರಲ್ಲಿ ಒಂದು ಖಾಲಿ ಸೀಟ್ ಇರಲಿದೆಯಂತೆ. ಪ್ರಿ ರಿಲೀಸ್ ಇವೆಂಟ್ನಲ್ಲಿ ನಿರ್ದೇಶಕ ಓಂ ರಾವತ್ ಅವರು ಎಲ್ಲಾ ಥಿಯೇಟರ್ ಮಾಲೀಕರಲ್ಲಿ ಈ ಬೇಡಿಕೆ ಇಟ್ಟಿದ್ದಾರೆ. ವಿದೇಶ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸೀಟ್ನನ್ನು ಹನುಮಾನ್ ದೇವರಿಗಾಗಿ ಖಾಲಿ ಇಡಿ ಎಂದು ಆದಿಪುರುಷ್ ಸಿನಿಮಾದ ನಿರ್ದೇಶಕ ಓಂ ರಾವತ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿನಿಮಾ ರಿಲೀಸ್ ದಿನ ಎಲ್ಲಾ ಥಿಯೇಟರ್ನಲ್ಲಿ ಒಂದು ಸೀಟ್ ಖಾಲಿ ಇರಲಿದೆಯಂತೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ಚಿತ್ರತಂಡದ ಭಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹನುಮಾನ್ಗೆ ಗೌರವ ಕೊಡುವ ಈ ನಡೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಪ್ರತಿಕ್ರಿಯಿಸಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬರದಿದ್ದರೆ ಏನು ಮಾಡುತ್ತೀರಿ? ಮೊದಲ ದಿನವೇ ನೆಗಟಿವ್ ಟಾಕ್ ಬಂದರೆ ಒಂದು ಸೀಟ್ ಅಲ್ಲ, ಇಡೀ ಥಿಯೇಟರ್ ಖಾಲಿಯಾಗುತ್ತದೆ ಎಂದು ಕಾಲೆಳೆದಿದ್ದಾರೆ.



ಇನ್ನೊಬ್ಬರು ಕಮೆಂಟ್ ಮಾಡಿ ಸಿನಿಮಾ ನೋಡಲು ಬರುವಾಗ ಚಪ್ಪಲಿ ಧರಿಸಿಕೊಂಡು ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಥಿಯೇಟರ್ನಲ್ಲಿ ಪ್ರಸಾದ ಅಥವಾ ಪಾಯಸ ಕೊಡುತ್ತೀರಾ ಎಂದು ಕಿಂಡಲ್ ಮಾಡಿದ್ದಾರೆ ಇನ್ನೊಬ್ಬರು. ಪಾಪ್ಕಾರ್ನ್, ಕೂಲ್ಡ್ರಿಂಕ್ಸ್ ಬದಲು ಪಾಯಸ ಮತ್ತು ಪ್ರಸಾದ ಕೊಡ್ತೀರಾ ಎಂದು ಕೇಳಿದ್ದಾರೆ ನೆಟ್ಟಿಗರು. ಇನ್ನು ಹನುಮಾನ್ ಥಿಯೇಟರ್ ಒಳಗೆ ಕುಳಿತ ಕೆಲವು ಫೋಟೋಶೋಪ್ ಮಾಡಿದ ಫೋಟೋಗಳು ವೈರಲ್ ಆಗುತ್ತವೆ ಎಂದಿದ್ದಾರೆ ಇನ್ನೊಬ್ಬರು. ಸಿನಿಮಾ ಚೆನ್ನಾಗಿದ್ರೆ ಇದನ್ನೆಲ್ಲಾ ಯಾಕೆ ಮಾಡ್ತೀರಿ ಎಂದು ಕೇಳಿದ್ದಾರೆ.



ಈ ರೀತಿ ಬೇಕಾಬಿಟ್ಟಿ ಕಮೆಂಟ್ ಮಾಡಿ ಚಿತ್ರತಂಡದ ಮಹತ್ವದ ಉದ್ದೇಶವನ್ನು ಸುಮ್ಮನೆ ನೋಯಿಸಬೇಡಿ ಎಂದಿದ್ದಾರೆ ಪ್ರಭಾಸ್ ಫ್ಯಾನ್ಸ್. ಅಂತೂ ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಹಾಗೂ ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ಮಾಡಲಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
one empty seat in theaters during adipurush release.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm