ಬ್ರೇಕಿಂಗ್ ನ್ಯೂಸ್
07-06-23 01:42 pm Source: news18 ಸಿನಿಮಾ
ಇದೇ ಮೊದಲ ಬಾರಿಗೆ ಆದಿಪುರುಷ್ ಸಿನಿಮಾ ತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅದೇನೆಂದರೆ ಆದಿಪುರುಷ್ ಸಿನಿಮಾ ರಿಲೀಸ್ ಆಗುವ ಪ್ರತಿ ಚಿತ್ರಮಂದಿರಲ್ಲಿ ಒಂದು ಖಾಲಿ ಸೀಟ್ ಇರಲಿದೆಯಂತೆ. ಪ್ರಿ ರಿಲೀಸ್ ಇವೆಂಟ್ನಲ್ಲಿ ನಿರ್ದೇಶಕ ಓಂ ರಾವತ್ ಅವರು ಎಲ್ಲಾ ಥಿಯೇಟರ್ ಮಾಲೀಕರಲ್ಲಿ ಈ ಬೇಡಿಕೆ ಇಟ್ಟಿದ್ದಾರೆ. ವಿದೇಶ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸೀಟ್ನನ್ನು ಹನುಮಾನ್ ದೇವರಿಗಾಗಿ ಖಾಲಿ ಇಡಿ ಎಂದು ಆದಿಪುರುಷ್ ಸಿನಿಮಾದ ನಿರ್ದೇಶಕ ಓಂ ರಾವತ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿನಿಮಾ ರಿಲೀಸ್ ದಿನ ಎಲ್ಲಾ ಥಿಯೇಟರ್ನಲ್ಲಿ ಒಂದು ಸೀಟ್ ಖಾಲಿ ಇರಲಿದೆಯಂತೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ಚಿತ್ರತಂಡದ ಭಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹನುಮಾನ್ಗೆ ಗೌರವ ಕೊಡುವ ಈ ನಡೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಪ್ರತಿಕ್ರಿಯಿಸಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬರದಿದ್ದರೆ ಏನು ಮಾಡುತ್ತೀರಿ? ಮೊದಲ ದಿನವೇ ನೆಗಟಿವ್ ಟಾಕ್ ಬಂದರೆ ಒಂದು ಸೀಟ್ ಅಲ್ಲ, ಇಡೀ ಥಿಯೇಟರ್ ಖಾಲಿಯಾಗುತ್ತದೆ ಎಂದು ಕಾಲೆಳೆದಿದ್ದಾರೆ.



ಇನ್ನೊಬ್ಬರು ಕಮೆಂಟ್ ಮಾಡಿ ಸಿನಿಮಾ ನೋಡಲು ಬರುವಾಗ ಚಪ್ಪಲಿ ಧರಿಸಿಕೊಂಡು ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಥಿಯೇಟರ್ನಲ್ಲಿ ಪ್ರಸಾದ ಅಥವಾ ಪಾಯಸ ಕೊಡುತ್ತೀರಾ ಎಂದು ಕಿಂಡಲ್ ಮಾಡಿದ್ದಾರೆ ಇನ್ನೊಬ್ಬರು. ಪಾಪ್ಕಾರ್ನ್, ಕೂಲ್ಡ್ರಿಂಕ್ಸ್ ಬದಲು ಪಾಯಸ ಮತ್ತು ಪ್ರಸಾದ ಕೊಡ್ತೀರಾ ಎಂದು ಕೇಳಿದ್ದಾರೆ ನೆಟ್ಟಿಗರು. ಇನ್ನು ಹನುಮಾನ್ ಥಿಯೇಟರ್ ಒಳಗೆ ಕುಳಿತ ಕೆಲವು ಫೋಟೋಶೋಪ್ ಮಾಡಿದ ಫೋಟೋಗಳು ವೈರಲ್ ಆಗುತ್ತವೆ ಎಂದಿದ್ದಾರೆ ಇನ್ನೊಬ್ಬರು. ಸಿನಿಮಾ ಚೆನ್ನಾಗಿದ್ರೆ ಇದನ್ನೆಲ್ಲಾ ಯಾಕೆ ಮಾಡ್ತೀರಿ ಎಂದು ಕೇಳಿದ್ದಾರೆ.



ಈ ರೀತಿ ಬೇಕಾಬಿಟ್ಟಿ ಕಮೆಂಟ್ ಮಾಡಿ ಚಿತ್ರತಂಡದ ಮಹತ್ವದ ಉದ್ದೇಶವನ್ನು ಸುಮ್ಮನೆ ನೋಯಿಸಬೇಡಿ ಎಂದಿದ್ದಾರೆ ಪ್ರಭಾಸ್ ಫ್ಯಾನ್ಸ್. ಅಂತೂ ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಹಾಗೂ ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ಮಾಡಲಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
one empty seat in theaters during adipurush release.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm