ಬ್ರೇಕಿಂಗ್ ನ್ಯೂಸ್
07-06-23 01:42 pm Source: news18 ಸಿನಿಮಾ
ಇದೇ ಮೊದಲ ಬಾರಿಗೆ ಆದಿಪುರುಷ್ ಸಿನಿಮಾ ತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅದೇನೆಂದರೆ ಆದಿಪುರುಷ್ ಸಿನಿಮಾ ರಿಲೀಸ್ ಆಗುವ ಪ್ರತಿ ಚಿತ್ರಮಂದಿರಲ್ಲಿ ಒಂದು ಖಾಲಿ ಸೀಟ್ ಇರಲಿದೆಯಂತೆ. ಪ್ರಿ ರಿಲೀಸ್ ಇವೆಂಟ್ನಲ್ಲಿ ನಿರ್ದೇಶಕ ಓಂ ರಾವತ್ ಅವರು ಎಲ್ಲಾ ಥಿಯೇಟರ್ ಮಾಲೀಕರಲ್ಲಿ ಈ ಬೇಡಿಕೆ ಇಟ್ಟಿದ್ದಾರೆ. ವಿದೇಶ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸೀಟ್ನನ್ನು ಹನುಮಾನ್ ದೇವರಿಗಾಗಿ ಖಾಲಿ ಇಡಿ ಎಂದು ಆದಿಪುರುಷ್ ಸಿನಿಮಾದ ನಿರ್ದೇಶಕ ಓಂ ರಾವತ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿನಿಮಾ ರಿಲೀಸ್ ದಿನ ಎಲ್ಲಾ ಥಿಯೇಟರ್ನಲ್ಲಿ ಒಂದು ಸೀಟ್ ಖಾಲಿ ಇರಲಿದೆಯಂತೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ಚಿತ್ರತಂಡದ ಭಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹನುಮಾನ್ಗೆ ಗೌರವ ಕೊಡುವ ಈ ನಡೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಪ್ರತಿಕ್ರಿಯಿಸಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬರದಿದ್ದರೆ ಏನು ಮಾಡುತ್ತೀರಿ? ಮೊದಲ ದಿನವೇ ನೆಗಟಿವ್ ಟಾಕ್ ಬಂದರೆ ಒಂದು ಸೀಟ್ ಅಲ್ಲ, ಇಡೀ ಥಿಯೇಟರ್ ಖಾಲಿಯಾಗುತ್ತದೆ ಎಂದು ಕಾಲೆಳೆದಿದ್ದಾರೆ.



ಇನ್ನೊಬ್ಬರು ಕಮೆಂಟ್ ಮಾಡಿ ಸಿನಿಮಾ ನೋಡಲು ಬರುವಾಗ ಚಪ್ಪಲಿ ಧರಿಸಿಕೊಂಡು ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಥಿಯೇಟರ್ನಲ್ಲಿ ಪ್ರಸಾದ ಅಥವಾ ಪಾಯಸ ಕೊಡುತ್ತೀರಾ ಎಂದು ಕಿಂಡಲ್ ಮಾಡಿದ್ದಾರೆ ಇನ್ನೊಬ್ಬರು. ಪಾಪ್ಕಾರ್ನ್, ಕೂಲ್ಡ್ರಿಂಕ್ಸ್ ಬದಲು ಪಾಯಸ ಮತ್ತು ಪ್ರಸಾದ ಕೊಡ್ತೀರಾ ಎಂದು ಕೇಳಿದ್ದಾರೆ ನೆಟ್ಟಿಗರು. ಇನ್ನು ಹನುಮಾನ್ ಥಿಯೇಟರ್ ಒಳಗೆ ಕುಳಿತ ಕೆಲವು ಫೋಟೋಶೋಪ್ ಮಾಡಿದ ಫೋಟೋಗಳು ವೈರಲ್ ಆಗುತ್ತವೆ ಎಂದಿದ್ದಾರೆ ಇನ್ನೊಬ್ಬರು. ಸಿನಿಮಾ ಚೆನ್ನಾಗಿದ್ರೆ ಇದನ್ನೆಲ್ಲಾ ಯಾಕೆ ಮಾಡ್ತೀರಿ ಎಂದು ಕೇಳಿದ್ದಾರೆ.



ಈ ರೀತಿ ಬೇಕಾಬಿಟ್ಟಿ ಕಮೆಂಟ್ ಮಾಡಿ ಚಿತ್ರತಂಡದ ಮಹತ್ವದ ಉದ್ದೇಶವನ್ನು ಸುಮ್ಮನೆ ನೋಯಿಸಬೇಡಿ ಎಂದಿದ್ದಾರೆ ಪ್ರಭಾಸ್ ಫ್ಯಾನ್ಸ್. ಅಂತೂ ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಹಾಗೂ ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ಮಾಡಲಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
one empty seat in theaters during adipurush release.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm