ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm