ಬ್ರೇಕಿಂಗ್ ನ್ಯೂಸ್
05-07-23 01:40 pm Source: News18 Kannada ಸಿನಿಮಾ
ನಿಹಾರಿಕಾ ಕೊನಿಡೇಲಾ ಹಾಗೂ ಚೈತನ್ಯ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನೆ ಪಡೆದಿದ್ದಾರೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ನಿಹಾರಿಕಾ ಅವರ ದಾಂಪತ್ಯ ಜೀವನದ ಬಿರುಕಿನ ಬಗ್ಗೆ ಕೆಲವು ತಿಂಗಳಿಂದಲೇ ಚರ್ಚೆ ನಡೆಯುತ್ತಿತ್ತು. ಇದೀಗ ವಿಚ್ಛೇದನೆಯೂ ಆಗಿದ್ದು ಇದೇ ಮೊದಲಬಾರಿಗೆ ತೆಲುಗು ನಟಿ, ನಿಹಾರಿಕಾ ತಮ್ಮ ಡಿವೋರ್ಸ್ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಶೇರ್ ಮಾಡುವಾಗ ನಟಿ ಕಮೆಂಟ್ ಟರ್ನ್ ಆಫ್ ಮಾಡಿದ್ದು ಯಾರೂ ಕೂಡಾ ನಟಿಯ ಪೋಸ್ಟ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ.
ಚೈತನ್ಯ ಹಾಗೂ ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಬದುಕಿನಲ್ಲಿ ಮುಂದೆ ಸಾಗಲು ನೀವು ನಮಗೆ ಕರುಣೆ ತೋರಿಸಿ ವರ್ತಿಸಬೇಕು. ಈ ಸಂದರ್ಭ ನಮ್ಮ ಬೆಂಬಲವಾಗಿ ನಿಂತ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಧನ್ಯವಾದಗಳು. ನಾನು ಈ ಸಂದರ್ಭ ನಮ್ಮ ಮುಂದಿನ ಬದುಕಿನಲ್ಲಿ ಮಂದುವರಿಯಲು ಸ್ವಲ್ಪ ಖಾಸಗಿತನವನ್ನು ಕೇಳುತ್ತಿದ್ದೇನೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಇಬ್ಬರೂ ಏಪ್ರಿಲ್ 1 ರಂದು ವಿಚ್ಛೇದನಕ್ಕೆ ಅರ್ಜಿ ಕೋರಿ ಕುಕಟ್ ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಜೂನ್ 5 ರಂದು ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರಿಗೆ ನ್ಯಾಯಾಲಯ ವಿಚ್ಛೇದನ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಮತ್ತೊಮ್ಮೆ ಸೆಲೆಬ್ರಿಟಿ ಜೋಡಿ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ.


ತೆಲುಗು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಜೋಡಿಯ ವಿಚ್ಛೇದನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನಿಹಾರಿಕಾ ಅವರು ಸದ್ಯ ಡಿವೋರ್ಸ್ನಿಂದ ಹೊರಗೆಬಂದು ಸಿನಿಮಾಗಳತ್ತ ಹೆಚ್ಚು ಗಮನ ಕೊಡುತ್ತಿದ್ದಾರೆ. ನಿಹಾರಿಕಾ ಡಿಸೆಂಬರ್ 2020 ರಲ್ಲಿ ಚೈತನ್ಯ ಜೊನ್ನಲಗಡ್ಡ ಅವರನ್ನು ವಿವಾಹವಾದರು. ಮತ್ತು ಅಂದಿನಿಂದ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ಅನಿರೀಕ್ಷಿತವಾಗಿ ಇವರಿಬ್ಬರ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಮಾಡಿದ ವದಂತಿ ನಿಜವಾಯಿತು.


ನಿಹಾರಿಕಾ ಹೈದರಾಬಾದ್ನ ಕುಕಟ್ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರೂ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಿದೆಯಂತೆ. ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದಾಗಿನಿಂದ ವಿಚ್ಛೇದನದ ಅನುಮಾನಗಳು ಪ್ರಾರಂಭವಾದವು.
Niharika Konidela shares Divorce news with Fans turn off comment Section.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm