ಬ್ರೇಕಿಂಗ್ ನ್ಯೂಸ್
05-07-23 01:40 pm Source: News18 Kannada ಸಿನಿಮಾ
ನಿಹಾರಿಕಾ ಕೊನಿಡೇಲಾ ಹಾಗೂ ಚೈತನ್ಯ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನೆ ಪಡೆದಿದ್ದಾರೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ನಿಹಾರಿಕಾ ಅವರ ದಾಂಪತ್ಯ ಜೀವನದ ಬಿರುಕಿನ ಬಗ್ಗೆ ಕೆಲವು ತಿಂಗಳಿಂದಲೇ ಚರ್ಚೆ ನಡೆಯುತ್ತಿತ್ತು. ಇದೀಗ ವಿಚ್ಛೇದನೆಯೂ ಆಗಿದ್ದು ಇದೇ ಮೊದಲಬಾರಿಗೆ ತೆಲುಗು ನಟಿ, ನಿಹಾರಿಕಾ ತಮ್ಮ ಡಿವೋರ್ಸ್ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಶೇರ್ ಮಾಡುವಾಗ ನಟಿ ಕಮೆಂಟ್ ಟರ್ನ್ ಆಫ್ ಮಾಡಿದ್ದು ಯಾರೂ ಕೂಡಾ ನಟಿಯ ಪೋಸ್ಟ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ.
ಚೈತನ್ಯ ಹಾಗೂ ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಬದುಕಿನಲ್ಲಿ ಮುಂದೆ ಸಾಗಲು ನೀವು ನಮಗೆ ಕರುಣೆ ತೋರಿಸಿ ವರ್ತಿಸಬೇಕು. ಈ ಸಂದರ್ಭ ನಮ್ಮ ಬೆಂಬಲವಾಗಿ ನಿಂತ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಧನ್ಯವಾದಗಳು. ನಾನು ಈ ಸಂದರ್ಭ ನಮ್ಮ ಮುಂದಿನ ಬದುಕಿನಲ್ಲಿ ಮಂದುವರಿಯಲು ಸ್ವಲ್ಪ ಖಾಸಗಿತನವನ್ನು ಕೇಳುತ್ತಿದ್ದೇನೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಇಬ್ಬರೂ ಏಪ್ರಿಲ್ 1 ರಂದು ವಿಚ್ಛೇದನಕ್ಕೆ ಅರ್ಜಿ ಕೋರಿ ಕುಕಟ್ ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಜೂನ್ 5 ರಂದು ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರಿಗೆ ನ್ಯಾಯಾಲಯ ವಿಚ್ಛೇದನ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಮತ್ತೊಮ್ಮೆ ಸೆಲೆಬ್ರಿಟಿ ಜೋಡಿ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ.


ತೆಲುಗು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಜೋಡಿಯ ವಿಚ್ಛೇದನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನಿಹಾರಿಕಾ ಅವರು ಸದ್ಯ ಡಿವೋರ್ಸ್ನಿಂದ ಹೊರಗೆಬಂದು ಸಿನಿಮಾಗಳತ್ತ ಹೆಚ್ಚು ಗಮನ ಕೊಡುತ್ತಿದ್ದಾರೆ. ನಿಹಾರಿಕಾ ಡಿಸೆಂಬರ್ 2020 ರಲ್ಲಿ ಚೈತನ್ಯ ಜೊನ್ನಲಗಡ್ಡ ಅವರನ್ನು ವಿವಾಹವಾದರು. ಮತ್ತು ಅಂದಿನಿಂದ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ಅನಿರೀಕ್ಷಿತವಾಗಿ ಇವರಿಬ್ಬರ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಮಾಡಿದ ವದಂತಿ ನಿಜವಾಯಿತು.


ನಿಹಾರಿಕಾ ಹೈದರಾಬಾದ್ನ ಕುಕಟ್ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರೂ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಿದೆಯಂತೆ. ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದಾಗಿನಿಂದ ವಿಚ್ಛೇದನದ ಅನುಮಾನಗಳು ಪ್ರಾರಂಭವಾದವು.
Niharika Konidela shares Divorce news with Fans turn off comment Section.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm