ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm