ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm