ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm