ಬ್ರೇಕಿಂಗ್ ನ್ಯೂಸ್
11-07-23 04:18 pm Source: News18 Kannada ಸಿನಿಮಾ
ಸುದೀಪ್ ಹಾಗೂ ನಿರ್ಮಾಪಕರ ವಿವಾದದ ಬಗ್ಗೆ ಮಾತಾಡಿದ ಭಾಮಾ ಹರೀಶ್, ನಟ ಸುದೀಪ್ ಅವರು ಕಾನೂನಾತ್ಮಕ ಹೋರಾಟ ಮಾಡ್ತಿನಿ ಎಂದು ಹೇಳಿದ್ದಾರೆ. ನಿನ್ನೆ ಸುದೀಪ್ ಪತ್ರ ಬರೆದಿದ್ದಾರೆ. ಈಗ ಅಭಿಮಾನಿಗಳು ಮನವಿ ಪತ್ರ ಕೊಟ್ಟಿದ್ದಾರೆ. ಅನೇಕ ಹೆಸರನ್ನು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಪತ್ರದ ಮೂಲಕ ಸುದೀಪ್ ಸ್ಪಷ್ಟನೆ
ನಿರ್ಮಾಪಕರ ಆರೋಪಗಳಿಗೆ ಕೊನೆಗೂ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘಕ್ಕೆ ಸುದೀರ್ಘ ಪತ್ರ ಬರೆದ ನಟ ಸುದೀಪ್, ನಿರ್ಮಾಪಕರ ಆರೋಪಗಳಿಗೆ ಉತ್ತರ ನೀಡಿದ್ದಾರೆ. ನಿರ್ಮಾಪಕರ ಎಮ್ ಎನ್ ಕುಮಾರ್ ನನ್ನ ಮೇಲೆ ಅರೋಪ ಮಾಡಿದ್ದಾರೆ ನನ್ನ ಮೇಲೆ ಅರೋಪ ಮಾಡಲು ಅವರು ಬಂದಾಗ ನೀವು ಸರಿಯಾದ ದಾಖಲೆಗಳಿವೆಯ ಎಂದು ಪರೀಕ್ಷಿಸ ಮಾಡಬೇಕಿತ್ತು.
ನನಗೂ ಅನೇಕರಿಂದ ಮೋಸ ಆಗಿದೆ
ಈ ಹಿಂದೆ ಇತರರ ಮೇಲೆ ಇಂತಹ ಅರೋಪಗಳ ಬಂದಾಗ ದೂರುಗಳು ಬಂದಾಗ ದಾಖಲೆ ಪರಿಶೀಲನೆ ಆಗ್ತಿತ್ತು. ಅದರೆ ನನ್ನ ವಿಚಾರದಲ್ಲಿ ಈ ಕೆಲಸ ಆಗಿಲ್ಲ ಯಾಕೆ?, ಇಂಡಸ್ಟ್ರಿಯಲ್ಲಿ ಸಾಕಷ್ಟು ಮಂದಿ ನನಗೆ ಮೋಸ ಮಾಡಿದ್ದಾರೆ. ದಾಖಲೆಗಳಿಲ್ಲದ ಕಾರಣ ನಾನು ಸುಮ್ಮನೆ ಆಗಿದ್ದೇನೆ.
ಕುಮಾರ್ ಆತ್ಮಹತ್ಯೆ ಮಾಡಿಕೊಂಡ್ರೆ ನಾನು ಹೊಣೆ ಎಂದ್ರು
ಕುಮಾರ್ ಅವರ ವಿಚಾರದಲ್ಲೂ ನಾನು ಮಾನವೀಯತೆಯ ಆಧಾರದಲ್ಲಿ ನೆರವು ನೀಡಲು ನಿರ್ಧರಿಸಿದ್ದೆ. ಅದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಸುದ್ದಿಗೋಷ್ಠಿಯಲ್ಲಿ ಸುರೇಶ್ ಅವರು ಕುಮಾರ್ ಆತ್ಮಹತ್ಯೆ ಮಾಡಿಕೊಂಡ್ರೆ ನಾನು ಹೊಣೆ ಅಂದಿದ್ದಾರೆ. ಸುರೇಶ್ ಅವರ ಈ ಹೇಳಿಕೆ ನನಗೆ ತುಂಬಾ ನೋವುಂಟು ಮಾಡಿದೆ. ಸಮಾಜಕ್ಕೆ ಅಪಾಯಕಾರಿ ಸಂದೇಶ್ ನೀಡುವಂತಿದೆ. ಸುರೇಶ್ ಅವರಿಗೂ ನೋಟಿಸ್ ನೀಡಿದ್ದೇನೆ. ಯಾವಾಗ ಚಿತ್ರರಂಗದಲ್ಲಿ ಇಂತಹ ಕೆಟ್ಟ ಬೆಳವಣಿಗೆ ಶುರುವಾಯ್ತು. ಸುರೇಶ್ ಹೇಳಿಕೆ ಕಾರಣದಿಂದಾಗಿ ನಾನು ನೋಟಿಸ್ ಕಳಿಸಿದ್ದೇನೆ ಹೊರತು ಆಕ್ರೋಶದಿಂದ ಅಲ್ಲ.
ನನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ
27 ವರ್ಷಗಳಿಂದ ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದೇನೆ. 45 ಸಿನಿಮಾಗಳಲ್ಲಿ ನಾಯಕ ನಟನಾಗಿದ್ದೇನೆ. ಎಂದಿಗೂ ಕಪ್ಪು ಚುಕ್ಕೆ ಬರುವಂತಹ ಒಂದೇ ಒಂದು ಕೆಲಸ ಮಾಡಿಲ್ಲ. ನನಗೆ ಕೆಲವೊಮ್ಮೆ ಮೋಸವಾಗಿದೆ. ಅನೇಕ ನಿರ್ಮಾಪಕರು ನನಗೆ ಇನ್ನು ಕೂಡ ಕೊಡಬೇಕಾದ ಹಣ ನೀಡಿಲ್ಲ. ನಾನು ಎಂದಿಗೂ ವಾಣಿಜ್ಯ ಮಂಡಳಿ ಮೆಟ್ಟಿಲು ಹತ್ತಿಲ್ಲ. ನಿಮ್ಮ ಪ್ರೀತಿಯ ಸುದೀಪ್ ಒಳ್ಳೆಯ ತನಕ್ಕೆ ಹೆಸರಾಗಿದ್ದಾನೆ ಹೊರತು ಕೆಟ್ಟತನಕ್ಕೆ ಅಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
ನನ್ನ ಮೇಲೆ ಒತ್ತಡ ಹಾಕ್ಬೇಡಿ- ಸುದೀಪ್
ದಯವಿಟ್ಟು ಈ ವಿಚಾರದಲ್ಲಿ ನನ್ನ ಮೇಲೆ ಒತ್ತಡ ಹಾಕದೆ ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳಿ ಎಂದು ಸುದೀಪ್ ಪತ್ರದಲ್ಲಿ ಬರೆದಿದ್ದಾರೆ. ನಾನೇನಾದ್ರೂ ತಪ್ಪು ಮಾಡಿದ್ರೆ ನ್ಯಾಯಾಲಯದಲ್ಲೇ ಶಿರಬಾಗಿ ತಪ್ಪು ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿಯಾಗಿಯೇ ಇದ್ದೇನೆ. ನ್ಯಾಯ, ಸತ್ಯ ಯಾವುದು ಎಂದು ತಿಳಿಸಲು ಕೊಂಚ ಸಮಯ ಬೇಕಿದೆ ಎಂದು ಸುದೀಪ್ ಪತ್ರದಲ್ಲಿ ಬರೆದಿದ್ದಾರೆ.
Complaint from Actor Sudeep Fans Against the Producers.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm