ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am