ಬ್ರೇಕಿಂಗ್ ನ್ಯೂಸ್
17-07-23 02:16 pm Source: Filmy Beat ಸಿನಿಮಾ
2018ರಲ್ಲಿ ತೆರೆಗೆ ಬಂದಿದ್ದ ಅಯೋಗ್ಯ ಚಿತ್ರದ ಮೂಲಕ ಸಿನಿ ರಸಿಕರ ಮನ ಗೆದ್ದಿದ್ದ ರಚಿತಾ ರಾಮ್ ಹಾಗೂ ನೀನಾಸಂ ಸತೀಶ್ ಜೋಡಿ ಎರಡನೇ ಬಾರಿಗೆ ಒಂದಾಗುತ್ತಿರುವ ಈ ಚಿತ್ರಕ್ಕೆ ಮನೋಹರ್ ಕಾಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ.
ಅಂದಹಾಗೆ ಮ್ಯಾಟ್ನಿ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದ್ದು, ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಚಿತ್ರದ ವಿಶೇಷ ಟೀಸರ್ ಸಹ ಬಿಡುಗಡೆಗೊಂಡಿತ್ತು. ರಚಿತಾ ರಾಮ್ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ಹಬ್ಬಗಳ ಪ್ರಯುಕ್ತ ಸಹ ವಿಶೇಷ ಪೋಸ್ಟರ್ಗಳನ್ನು ಹಂಚಿಕೊಂಡಿದ್ದ ಮ್ಯಾಟ್ನಿ ಚಿತ್ರತಂಡ ಆದಷ್ಟು ಬೇಗ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ ಎಂಬ ಸೂಚನೆಯನ್ನು ನೀಡಿತ್ತು.

ಆದರೆ ಅದ್ಯಾಕೋ ಹೋದ ವರ್ಷದ ಯುಗಾದಿ ಹಬ್ಬದ ಬಳಿಕ ಮ್ಯಾಟ್ನಿ ಚಿತ್ರತಂಡ ಸೈಲೆಂಟ್ ಆಗಿಬಿಟ್ಟಿತ್ತು. ಚಿತ್ರದ ಯಾವುದೇ ಅಪ್ಡೇಟ್ ಸಹ ಹೊರಬಿದ್ದಿರಲಿಲ್ಲ. ಅರೇ... ಒಳ್ಳೆಯ ಗುಣಮಟ್ಟದ ಪೋಸ್ಟರ್ಗಳನ್ನು ಹಂಚಿಕೊಳ್ಳುತ್ತಿದ್ದ ಮ್ಯಾಟ್ನಿ ಚಿತ್ರತಂಡ ಹೀಗೆ ಸುಮ್ಮನೆ ಏಕಾಯಿತು, ಚಿತ್ರವೇನಾದ್ರೂ ನಿಂತು ಹೋಯ್ತಾ ಎಂಬ ಬೇಸರದ ಪ್ರಶ್ನೆ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಅಭಿಮಾನಿ ಬಳಗದಲ್ಲಿ ಮೂಡಿತ್ತು.
ಆದರೆ ಇದೀಗ ಮ್ಯಾಟ್ನಿ ಚಿತ್ರತಂಡ ಅಪ್ಡೇಟ್ ಒಂದನ್ನು ಹಂಚಿಕೊಳ್ಳುವುದರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿ ಮಾಡಲು ಆರಂಭಿಸಿದೆ. ಹೌದು, ನಿನ್ನೆ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ ಇಂದು ( ಜುಲೈ 17 ) ಸಂಜೆ 6.03ಕ್ಕೆ ಚಿತ್ರದ ಮುಂದಿನ ಅಪ್ಡೇಟ್ ಅನ್ನು ಅನಾವರಣ ಮಾಡಲಿದ್ದೇವೆ ಎಂದು ಬರೆದುಕೊಂಡಿದೆ.

ಈ ಮೂಲಕ ಮ್ಯಾಟ್ನಿ ಚಿತ್ರತಂಡ ತನ್ನ ಟ್ರೈಲರ್ ಬಿಡುಗಡೆ ದಿನಾಂಕವನ್ನೇದಾರೂ ಘೋಷಿಸುತ್ತಾ ಅಥವಾ ಚಿತ್ರ ಚಿತ್ರಮಂದಿರಗಳಿಗೆ ಯಾವಾಗ ಲಗ್ಗೆ ಇಡಲಿದೆ ಎಂಬ ಮಾಹಿತಿಯನ್ನೇದರೂ ಹಂಚಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಬಿಡುಗಡೆಯಾಗಿದ್ದ ಟೀಸರ್ನಲ್ಲಿನ ಕಂಟೆಂಟ್ ನೋಡಿದರೆ ಇದೊಂದು ಪಕ್ಕಾ ಪ್ರೇಮ ಕಥೆಯುಳ್ಳ ಚಿತ್ರ ಎಂಬುದು ತಿಳಿದುಬಂದಿತ್ತು.
ನಾಯಕಿಯ ಅಂದ ಹಾಗೂ ಸ್ನೇಹದ ಕುರಿತು ಸಾಲು ಸಾಲು ಮೆಚ್ಚುಗೆಯ ಕವನಗಳನ್ನು ಹೇಳಿದ್ದ ನಾಯಕ ಆಕೆಯ ಕಾಲಿಗೆ ಗೆಜ್ಜೆ ಕಟ್ಟಿ ತನ್ನ ಒಲವನ್ನು ಹೇಳಿಕೊಂಡಿದ್ದ. ಪ್ರೇಮಿಗಳ ದಿನಾಚರಣೆಯ ವಿಶೇಷ ದಿನದಂದು ಬಂದಿದ್ದ ಈ ಟೀಸರ್ ಹಾಗೂ ಅದರಲ್ಲಿನ ಕಂಟೆಂಟ್ ಅಂದಿನ ದಿನಕ್ಕೆ ತಕ್ಕನಾಗಿತ್ತು ಹಾಗೂ ಸಿನಿ ರಸಿಕರ ಮನ ಗೆದ್ದಿತ್ತು. ಅಯೋಗ್ಯ ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮ್ಯಾಟ್ನಿ ಮೂಲಕ ಮತ್ತೊಮ್ಮೆ ಗೆಲ್ಲಲಿದೆಯಾ ಕಾದ ನೋಡಬೇಕಿದೆ.
Satish ninasam and Rachita ram starrer matinee update to be out today at 6 pm.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm