ಬ್ರೇಕಿಂಗ್ ನ್ಯೂಸ್
09-08-23 02:23 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ನಡೆಯುತ್ತಿದ್ದು ಸಂಜೆ ನಾಲ್ಕು ಗಂಟೆಯ ವೇಳೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಮಧ್ಯೆ ಸ್ಪಂದನಾ ಅವರ ಹಳೆಯ ಕೆಲವು ಫೋಟೋಗಳು ವೈರಲ್ ಆಗಿವೆ. ಸ್ಪಂದನಾ ತಮ್ಮ ಶೈಕ್ಷಣಿಕ ಜೀವನದ ಸಮಯದಲ್ಲಿ ಗೆಳತಿಯರೊಂದಿಗೆ ಹೋದ ಪ್ರವಾಸದ ಫೋಟೋ ಕೂಡಾ ವೈರಲ್ ಆಗಿದೆ. ಇದರಲ್ಲಿ ನದಿಯೊಂದರ ತಡದಲ್ಲಿ ಗೆಳತಿಯರೊಂದಿಗೆ ಸ್ಪಂದನಾ ನಿಂತಿರುವುದುನ್ನು ಕಾಣಬಹುದು.
ಆಕಾಶ ನೀಲಿ ಬಣ್ಣ ಹಾಗೂ ನೇರಳೆ ಬಣ್ಣದ ಕಾಂಬಿನೇಷನ್ನ ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಸ್ಪಂದನಾ ಅವರ ಹಳೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸ್ಪಂದನಾ ಸಿಂಪಲ್ ಆಗಿ ಸುಂದರವಾಗಿ ಕಾಣಿಸಿದ್ದಾರೆ. ಸ್ಪಂದನಾ ವಿಜಯ್ ರಾಘವೇಂದ್ರ ಅವರ ಗೆಳತಿಯರೂ ಅವರ ಅಂತಿಯ ದರ್ಶನ ಪಡೆದರು. ಸ್ಯಾಂಡಲ್ವುಡ್ ಗಣ್ಯರು ಅಂತಿಮ ದರ್ಶನ ಮಾಡಿ ನಟ ರಾಘು ಅವರಿಗೆ ಸಾಂತ್ವನ ಹೇಳಿದ್ದಾರೆ.
ಬ್ಯಾಂಕಾಕ್ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಗೆಳೆತಿಯರೊಂದಿಗೆ ಪ್ರವಾಸ ಹೋಗಿದ್ದರು. ಇಂದು ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಬ್ಯಾಂಕಾಕ್ನಿಂದ ಥಾಯ್ ವಿಮಾನದಲ್ಲಿ ಬಂದ ಸ್ಪಂದನಾ ಪಾರ್ಥಿವ ಶರೀರವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಪಡೆದುಕೊಂಡಿದ್ದರು. ಬಳಿಕ ಮಲ್ಲೇಶ್ವರಂನ ಸ್ಪಂದನಾ ಅವರ ತವರು ಮನೆಗೆ ತೆಗೆದಕೊಂಡು ಹೋಗಲಾಗಿತ್ತು. ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನ ನೀಡಲು ನಿರ್ಧರಿಸಲಾಗಿದೆ.
ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ಮಂದಿ ಭೇಟಿ ಕೊಡುತ್ತಿದ್ದಾರೆ. ನಟ ಸೃಜನ್ ಲೋಕೆಶ್ ಕುಟುಂಬ, ನಟಿ ಅನುಶ್ರೀ, ನಿರ್ದೇಶಕ ಆಕಾಶ್ ಶ್ರೀವತ್ಸ, ಚಿತ್ರನಟ ನಿರ್ದೇಶಕ, ವಿಕ್ರಂ ಸೂರಿ, ನಟಿ ಸುಧಾರಣಿ, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಂತಿಮ ದರ್ಶನ ಮಾಡಿ ನಟನಿಗೆ ಧೈರ್ಯ ತುಂಬಿದರು
Spandana Raghavendra Old Photos Viral.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm