ಬ್ರೇಕಿಂಗ್ ನ್ಯೂಸ್
19-08-23 01:49 pm Source: News18 Kannada ಸಿನಿಮಾ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಈ ಮಾರ್ಟಿನ್ ಸಿನಿಮಾದ ಹೊಸ ವಿಚಾರ ಹೊರ ಬಿದ್ದಿದೆ. ಆ್ಯಕ್ಷನ್ ಮಾಸ್ಟರ್ ರವಿ ವರ್ಮ ಈ ಒಂದು ವಿಷಯ ಹೇಳಿಕೊಂಡಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ಗಳನ್ನ ಬರೋಬ್ಬರಿ 30ಕ್ಕೂ ಹೆಚ್ಚು ದಿನ ಚಿತ್ರೀಕರಿಸಿರೋ ವಿಷಯ ಗೊತ್ತೇ ಇದೆ.
ಆದರೆ ಇದೇ ಸಿನಿಮಾದ ಕೊನೆಯ ದೃಶ್ಯಗಳಿಗೆ ಮೂವರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ. ಟಾಲಿವುಡ್ನ ರಾಮ್-ಲಕ್ಷ್ಮಣ್ ಒಂದಷ್ಟು ದೃಶ್ಯಗಳನ್ನ ಡೈರೆಕ್ಟರ್ ಮಾಡಿದ್ದಾರೆ. ಉಳಿದ ಎರಡು ಚೇಜಿಂಗ್ ದೃಶ್ಯಗಳನ್ನ ಕನ್ನಡದ ಸಾಹಸ ನಿರ್ದೇಶಕ ರವಿ ವರ್ಮ ಅವರೇ ಮಾಡಿದ್ದಾರೆ.

ಈ ಎರಡೂ ಚೇಜಿಂಗ್ ದೃಶ್ಯಗಳಲ್ಲಿ ಒಂದೇ ಒಂದು ದೃಶ್ಯಕ್ಕೆ ಹೆಚ್ಚು ಕಡಿಮೆ ೧೦ ಕೋಟಿ ಖರ್ಚಾಗಿದೆ. ಈ ಒಂದು ದೃಶ್ಯಕ್ಕೆ ದುಬಾರಿ ಕಾರುಗಳಾ ಬಳಕೆ ಆಗಿದೆ. ಟ್ರಕ್ಗಳ ಉಪಯೋಗಿಸಿದ್ದೇವೆ. ವಿಶೇಷ ಅನಿಸೋ ಸಾಹಸಗಳೆಲ್ಲವನ್ನೂ ಇಲ್ಲಿ ಮಾಡಿರೋದಾಗಿಯೂ ರವಿ ವರ್ಮ ಹೇಳಿಕೊಂಡಿದ್ದಾರೆ.

ಮಾರ್ಟಿನ್ ಸಿನಿಮಾದಲ್ಲಿ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯ
ಈ ಒಂದು ಮಾತನ್ನ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ಒಪ್ಪಿಕೊಳ್ತಾರೆ. ತಮ್ಮ ಸಿನಿಮಾದ ಆ್ಯಕ್ಷನ್ ದೃಶ್ಯಗಳು ಬೇರೆ ಲೆವಲ್ಗೆ ಇವೆ ಅನ್ನೊದು ಇವರ ಅಭಿಪ್ರಾಯ ಅಂತಲೂ ಹೇಳಬಹುದು. ಮಾರ್ಟಿನ್ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯದ ಬಗ್ಗೆ ಇನ್ನಿಲ್ಲದಂತೆ ಕುತೂಹಲ ಇದೆ.
ಸಿನಿಮಾದ ಮೊದಲ ಟೀಸರ್ ಕೂಡ ಈ ಒಂದು ನಂಬಿಕೆಯನ್ನ ಈಗಾಗಲೇ ಹೆಚ್ಚು ಮಾಡಿದೆ. ಮೂರು ಸಾಹಸ ನಿರ್ದೇಶಕರ ಕೆಲಸದ ಈ ಚಿತ್ರದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬೇಜಾನ್ ಆ್ಯಕ್ಷನ್ ಮಾಡಿದ್ದಾರೆ. ಸಾಹಸ ನಿರ್ದೇಶಕ ರವಿ ವರ್ಮ ಅವರ ಸಾಹಸಗಳ ಖದರ್ ಬೇರೇನೆ ಇದೆ.

ಮಾರ್ಟಿನ್ ಲುಕ್ಗೆ ವಾಪಾಸ್ ಆದ ಆ್ಯಕ್ಷನ್ ಪ್ರಿನ್ಸ್
ಇವರ ವಿಶೇಷ ಸಾಹಸಗಳ ಜೊತೆಗೆ ಟಾಲಿವುಡ್ನ ರಾಮ್-ಲಕ್ಷ್ಮಣ್ ಅವರ ಸಾಹಗಳೂ ಸಾಥ್ ಕೊಟ್ಟಂತಿವೆ. ಹಾಗಾಗಿಯೇ ಮಾರ್ಟಿನ್ ಸಿನಿಮಾದಲ್ಲಿ ಹೈವೋಲ್ಟೇಜ್ ಸಾಹಸಗಳನ್ನ ನಿರೀಕ್ಷೆ ಮಾಡಬಹುದಾಗಿದೆ.
ಚಿತ್ರದ ಬಾಕಿ ಉಳಿದ ಹಾಡಿನ ಚಿತ್ರೀಕರಣ ಇನ್ನೇನು ಶುರು ಆಗಬೇಕಿದೆ. ನಾಯಕ ನಟ ಧ್ರುವ ಸರ್ಜಾ ಅವರು ವಾಪಸ್ ಮಾರ್ಟಿನ್ ಲುಕ್ಗೆ ಬಂದಿದ್ದಾರೆ.
ಇನ್ನೇನು ಉಳಿದಿರೋ ಪ್ಯಾಚ್ ವರ್ಕ್ ಕೂಡ ನಡೆಬೇಕಿದೆ. ಉಳಿದಂತೆ ಮಾರ್ಟಿನ್ ಸಿನಿಮಾ ಕನ್ನಡದ ಮತ್ತೊಂದು ಬಿಗ್ ಬಜೆಟ್ನ ಪ್ಯಾನ್ ಇಂಡಿಯಾ ಚಿತ್ರವೇ ಆಗಿದೆ. ನಿರೀಕ್ಷೆ ಕೂಡ ಡಬಲ್ ಟ್ರಿಪಲ್ ಆಗಿಯೇ ಇದೆ.
Sandalwood Action Prince Dhruva Sarja Acted Martin Latest Updates.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm