ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm