ಬ್ರೇಕಿಂಗ್ ನ್ಯೂಸ್
06-08-20 08:00 am Headline Karnataka News Network ಸಿನಿಮಾ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.
ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ.
ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ ಮಾಡಲಿಲ್ಲ. ನಾನು ಸಿನಿಮಾದಲ್ಲಿ ಅಭಿನಯಿಸುವ ಅವಕಾಶಕ್ಕಾಗಿ ಹೀರೋಗಳ ಜೊತೆ ಮಲಗಲಿಲ್ಲ ಅಥವಾ ಯಾರೊಂದಿಗೂ ಅಫೇರ್ ಕೂಡ ಇಟ್ಟುಕೊಂಡಿರಲಿಲ್ಲ. ಬಹಳಷ್ಟು ಸಂದರ್ಭಗಳಲ್ಲಿ ನನ್ನನ್ನು ಅಹಂಕಾರ ಇರುವವಳು ಎಂದು ಕರೆದಿದ್ದರು. ಯಾಕೆಂದರೆ ನಾನು ಅವರು ಹೇಳಿದಂತೆ ಕೇಳುತ್ತಿರಲಿಲ್ಲ. ಅವರು ನಗು ಎಂದರೆ ನಗಬೇಕು, ನನ್ನನ್ನು ಕುಳಿತುಕೋ ಎಂದಾಗ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಅವರ ತಾಳಕ್ಕೆ ನಾನು ಕುಣಿಯುತ್ತಿರಲಿಲ್ಲ” ಎಂದು ತಾವು ಅನುಭವಿಸಿದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ತಾನು ನಟಿಯಾಗಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ನನ್ನ ವಿರುದ್ಧ ಗಾಸಿಪ್ ಕಾಲಂಗಳಲ್ಲಿ ಏನೇನೋ ಲೇಖನಗಳು ಪ್ರಕಟವಾಗುತ್ತಿದ್ದವು. ಆದರೆ ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ನಾನು ನನ್ನದೇ ಆದ ಕೆಲಸವನ್ನು ಮಾಡಿಕೊಂಡು, ನನ್ನ ಸ್ವಂತ ನಿಯಮಗಳಿಗೆ ಅನುಗುಣವಾಗಿ ಬದುಕಲು ಬಯಸುತ್ತಿದ್ದೆ ಎಂದು ರವೀನಾ ಹೇಳಿದ್ದಾರೆ.
ಇಡೀ ಭಾರತ ಚಿತ್ರರಂಗವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದು ‘ಕೆಜಿಎಫ್’ ಸಿನಿಮಾ. ಕೆಜಿಎಫ್-2 ಸಿನಿಮಾ ಕೂಡ ಬಿಡುಗಡೆಯ ಮೊದಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರವೀನಾ ಟಂಡನ್ ‘ಕೆಜಿಎಫ್-2’ ಸಿನಿಮಾದಲ್ಲಿ ಪ್ರಧಾನ ಮಂತ್ರಿ ರಮಿಕಾ ಸೇನ್ ಪಾತ್ರದ ಅಭಿನಯಿಸಿದ್ದಾರೆ.
ಇತ್ತೀಚೆಗೆ ಸಿನಿಮಾದ ಬಗ್ಗೆ ಮಾತನಾಡುತ್ತಾ, “ಕೆಜಿಎಫ್ ಸಿನಿಮಾದಲ್ಲಿ ನಾನು ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಅದು ತುಂಬ ಪವರ್ ಫುಲ್ ಪಾತ್ರವಾಗಿದೆ. ಅಲ್ಲದೇ ಬಹಳ ಕುತೂಹಲ ಹೊಂದಿರುವ ಈ ಸಿನಿಮಾದಲ್ಲಿ ಅವಳೇ ಹೀರೋ ಆಗಿರುತ್ತಾಳೆ. ಹಾಗೆಯೇ ವಿಲನ್ ಕೂಡ ಅವಳೇ ಆಗಿರುತ್ತಾಳೆ. ಕೆಜಿಎಫ್ ಸಿನಿಮಾ ಕಥೆ ತುಂಬಾ ಆಸಕ್ತಿದಾಯಕವಾಗಿದೆ” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm