ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm