ಬ್ರೇಕಿಂಗ್ ನ್ಯೂಸ್
12-11-20 05:40 pm Headline Karnataka News Network ಸಿನಿಮಾ
ಮುಂಬೈ, ನವೆಂಬರ್ 12: ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಆಸಿಫ್ ಬಾಸ್ರಾ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
53 ವರ್ಷದ ಆಸಿಫ್ ಬಾಸ್ರಾ ಧರ್ಮಶಾಲಾದಲ್ಲಿ ಐದು ವರ್ಷಗಳಿಂದ ಫ್ಲ್ಯಾಟ್ ಒಂದನ್ನು ಬಾಡಿಗೆ ಪಡೆದು ವಾಸವಿದ್ದರು. ಆತ್ಮಹತ್ಯೆ ವಿಚಾರ ಗೊತ್ತಾಗುತ್ತಲೇ ಫಾರೆನ್ಸಿಕ್ ತಜ್ಞರು ಮತ್ತು ಪೊಲೀಸರು ಧಾವಿಸಿದ್ದಾರೆ. ಆದರೆ, ಸಾವಿಗೆ ಕಾರಣ ಏನಿರಬಹುದು ಎನ್ನೋದು ಇನ್ನೂ ಗೊತ್ತಾಗಿಲ್ಲ.
ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಾವು ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಆಸಿಫ್ ಬಾಸ್ರಾ ಕೂಡ ಸುಶಾಂತ್ ಜೊತೆಗೆ ಕೈ ಪೊ ಚೆ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ರಾಣಿ ಮುಖರ್ಜಿಯ ಹಿಚ್ ಕಿ, ಹೃತಿಕ್ ರೋಶನ್ ನಟನೆಯ ಕೃಷ್ 3, ಶಾಹಿದ್ ಕಪೂರ್ ಮತ್ತು ಕರಿನಾ ಕಪೂರ್ ನಟಿಸಿದ್ದ ಜಬ್ ವೆ ಮತ್, ಅನುರಾಗ್ ಕಶ್ಯಪ್ ಅವರ ಬ್ಲಾಕ್ ಫ್ರೈಡೇ, ಸೈಫ್ ಆಲಿ ಖಾನ್ ಅವರ ಕಾಲಾಕಂದಿ ಚಿತ್ರಗಳಲ್ಲಿ ನಟಿಸಿದ್ದರು. ಟಿವಿ ಕಿರುತೆರೆ ಮತ್ತು ರಂಗಭೂಮಿಯಲ್ಲೂ ಆಸಿಫ್ ಬಾಸ್ರಾ ದೊಡ್ಡ ಹೆಸರು ಮಾಡಿದ್ದರು. ಆಂಧ್ರಪ್ರದೇಶದ ಅಮರಾವತಿಯಲ್ಲಿ ಜನಿಸಿದ್ದ ಆಸಿಫ್, 1989ರಲ್ಲಿ ಮುಂಬೈಗೆ ಪಯಣ ಬೆಳೆಸಿದ್ದರು. ಅಲ್ಲಿಂದಲೇ ರಂಗಭೂಮಿ ಕಲಾವಿದನಾಗಿ ತೊಡಗಿಸಿಕೊಂಡು ಹೆಸರು ಗಳಿಸಿದ್ದರು. ಇತ್ತೀಚಿನ ಎರಡು ದಶಕಗಳಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದರು.
ಆಸಿಫ್ ಬಾಸ್ರಾ ಸಾವಿನ ಬಗ್ಗೆ ಬಾಲಿವುಡ್ ದಿಗ್ಗಜರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಶಾಕಿಂಗ್ ನ್ಯೂಸ್. ಲಾಕ್ಡೌನ್ ಮೊದಲು ನಾವು ಜೊತೆಯಾಗೇ ನಟಿಸಿದ್ದೆವು. ಇದನ್ನು ನಂಬಲಾಗುತ್ತಿಲ್ಲ ಎಂದು ನಟ ಮನೋಜ್ ಬಾಜಪೇಯಿ ಹೇಳಿದ್ದಾರೆ.
Film actor Asif Basra was found hanging in a private complex in Dharamshala. Forensic team is at the spot and police is investigating the matter: SSP Kangra Vimukt Ranjan. #HimachalPradesh (Picture credit: Asif Basra's website) pic.twitter.com/nxpWNLi8VU
— ANI (@ANI) November 12, 2020
Actor Asif Basra was found dead in Himachal Pradesh's Mcleodganj, the police have said. A forensic team has arrived to find out how he died, the police said, adding they are investigating whether it was death by suicide. He was 53.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm