ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm