ಬ್ರೇಕಿಂಗ್ ನ್ಯೂಸ್
04-12-20 10:59 am Source: FILMIBEAT ಸಿನಿಮಾ
ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಎಲ್ಲಾ ರಾಜಕೀಯ ಪಕ್ಷಗಳು ಇದೀಗ ಹಳ್ಳಿ ರಾಜಕೀಯದತ್ತ ಮುಖ ಮಾಡಿವೆ.
ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಸಹ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ್ದು, ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೇಗೆ ಸ್ಪರ್ಧಿಸಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಜಾಕೀಯ ಪಕ್ಷದಿಂದ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದಂತೆ. ಪ್ರಜಾಕೀಯದ ಸದಸ್ಯರೇ ನಿಲ್ಲಬೇಕು ಎಂಬ ನಿಯಮ ಏನೂ ಇರುವುದಿಲ್ಲ ಎಂದಿದ್ದಾರೆ ಉಪೇಂದ್ರ.

ಆದರೆ ಪ್ರಜಾಕೀಯದಿಂದ ಏಳು ಕಾರ್ಯವೈಖರಿ ವಿಧಾನವನ್ನು ಉಪೇಂದ್ರ ಅವರು ಬಿಡುಗಡೆ ಮಾಡಿದ್ದು, ಆ ಕಾರ್ಯ ವೈಖರಿಯನ್ನು ಜನರಿಗೆ ತೋರಿಸಿ ಮತಯಾಚನೆ ಮಾಡಬೇಕು, ಹಾಗೂ ಗೆದ್ದ ನಂತರ ಅದೇ ಕಾರ್ಯವೈಖರಿಯಂತೆ ನಡೆದುಕೊಳ್ಳಬೇಕು ಎಂದಿದ್ದಾರೆ ಉಪೇಂದ್ರ. ಜೊತೆಗೆ ಹಣ ಖರ್ಚು ಮಾಡಿ ಪ್ರಚಾರ ಮಾಡುವಂತಿಲ್ಲ ಎಂಬ ಪಕ್ಷದ ಷರತ್ತನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲನೇ ಹಂತದ ಚುನಾವಣೆ ಮತದಾನವು ಡಿಸೆಂಬರ್ 22, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಫಲಿತಾಂಶವು ಡಿಸೆಂಬರ್ 30 ರಂದು ಪ್ರಕಟವಾಗಲಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm