ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm