ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm