ಬ್ರೇಕಿಂಗ್ ನ್ಯೂಸ್
09-12-20 11:04 am Headline Karnataka News Network ಸಿನಿಮಾ
ತಮಿಳುನಾಡು. ಡಿ.9: 2020 ನಿಜಕ್ಕೂಕರಾಳ ವರ್ಷವಾಗಿ ಬದಲಾಗಿದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಮತ್ತೊಂದು ಕಡೆ ಸಾವುಗಳ ಸರಣಿ. ಅದರಲ್ಲೂ ಸಿನಿ ರಂಗದಲ್ಲಂತೂ ತುಂಬಾ ಮಂದಿ ಅಗಲುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಸಾವುಗಳ ಸರಣಿ ಮುಂದುವರೆಯುತ್ತಲೇ ಇದೆ. ಒಂದರ ಹಿಂದೆ ಒಂದರಂತೆ ಕಲಾವಿದರ ಸಾವಿನ ಸುದ್ದಿ ಸಿನಿಪ್ರಿಯರಿಗೆ ಆಘಾತ ನೀಡುತ್ತಲೇ ಇದೆ. ಸುಶಾಂತ್ ಸಿಂಗ್ ರಜಪೂತ್, ರಿಷಿ ಕಪೂರ್, ಬಾಲಸುಬ್ರಹ್ಮಣ್ಯಂ, ಬುಲೆಟ್ ಪ್ರಕಾಶ್, ಮಧು ಮೈಕೆಲ್, ಇರ್ಫಾನ್ ಖಾನ್ ಹೀಗೆ ಹಲವಾರು ಮಂದಿ ಅಗಲಿದ್ದಾರೆ. ಈಗ ಖ್ಯಾತ ಕಿರುತೆರೆ ನಟಿಯೊಬ್ಬರು ತಮಿಳುನಾಡಿನ ಹೋಟೆಲ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೌದು, ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಈಗ ಸಾವನ್ನಪ್ಪಿದ್ದಾರೆ. ಪಾಂಡಿಯನ್ ಸ್ಟೋರ್ಸ್ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.
ಚಿತ್ರಾ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹಿರಿಯರ ಸಮ್ಮತಿ ಮೇರೆಗೆ ಈ ಜೋಡಿಯ ನಿಶ್ವಿತಾರ್ಥವನ್ನು ಜನವರಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತಂತೆ.

ಹೇಮಂತ್ ರವಿ ಅವರೊಂದಿಗೆ ಹೋಟೆಲ್ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್ ಅವರೊಂದಿಗೆ ಹೋಟೆಲ್ನಲ್ಲಿದ್ದ ಚಿತ್ರಾ, ಬೆಳಿಗ್ಗೆ ಇವಿಪಿ ಪಾರ್ಕ್ನಲ್ಲಿ ಮೊದಲ ಶೆಡ್ಯೂಲ್ ಶೂಟಿಂಗ್ ಮುಗಿಸಿಕೊಂಡು ಹೋಟೆಲ್ ರೂಮಿಗೆ ಬಂದಿದ್ದರಂತೆ. ನಂತರ ಸ್ನಾನಕ್ಕೆ ಹೋಗುವುದಾಗಿ ಹೇಮಂತ್ ಅವರಿಗೆ ಹೇಳಿ ಹೋದ ಚಿತ್ರಾ, ತುಂಬಾ ಸಮಯವಾದರೂ ಬಾಗಿಲು ತೆಗೆಯಲಿಲ್ಲವಂತೆ. ಇದರಿಂದಾಗಿ ಗಾಬರಿಗೊಂಡ ಹೇಮಂತ್ ಹೋಟೆಲ್ ಸಿಬ್ಬಂದಿಯನ್ನು ಕರೆಸಿ, ಡುಪ್ಲಿಕೇಟ್ ಕೀಯಿಂದ ಬಾಗಿಲು ತೆರೆಸಿದ್ದಾರೆ ಎನ್ನಲಾಗಿದೆ.

ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದಾಗ ಚಿತ್ರಾ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎಂದು ಹೇಳಲಾಗಿದೆ. ಚಿತ್ರಾ ಸೀರೆಯಿಂದ ಫ್ಯಾನ್ಗೆ ನೇಣು ಹಾಕಿಕೊಂಡಿದ್ದು, ಅವರದ್ದು ಆತ್ಮಹತ್ಯೆ ಎಂದು ಶಂಕಿಸಲಾಗುತ್ತಿದೆ.
29 ವರ್ಷದ ನಟಿ ಚಿತ್ರಾ ನಿನ್ನೆವರೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ಸಂಜೆ ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಯುವ ನಟಿಯ ಅಗಲಿಕೆ ಅಭಿಮಾನಿಗಳಿಗೆ ಹಾಗೂ ಸಹ ನಟರಿಗೆ ನಿಜಕ್ಕೂ ಆಘಾತ ಉಂಟು ಮಾಡಿದೆ. ಚಿತ್ರಾ ನಟನೆ ಆರಂಭಿಸುವ ಮೊದಲು ನಿರೂಪಕಿಯಾಗಿ ಕಿರುತೆರೆಗೆ ಪರಿಚಯವಾದವರು. ಇವರ ತಂದೆ ಕಾಮರಾಜ್ ನಿವೃತ್ತ ಪೊಲೀಸ್ ಅಧಿಕಾರಿ. ಇವರ ಅಣ್ಣ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm