ಬ್ರೇಕಿಂಗ್ ನ್ಯೂಸ್
14-12-20 11:11 am Source: FILMIBEAT ಸಿನಿಮಾ
“ದ ಡರ್ಟಿ ಪಿಕ್ಚರ್" ಸೇರಿದಂತೆ ಬಾಲಿವುಡ್ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ 33 ವರ್ಷದ ನಟಿ ಆರ್ಯ ಬ್ಯಾನರ್ಜಿ ಕಳೆದ ಶುಕ್ರವಾರ ದಕ್ಷಿಣ ಕೋಲ್ಕತಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಕೋಲ್ಕತ್ತಾದ ಜೋಧ್ಪುರ್ ಪಾರ್ಕ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ನಿಗೂಢವಾಗಿ ಅಸಹಜ ಎನ್ನುವ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿರುವುದನ್ನು ಕಂಡು ಅನೇಕ ಊಹಾಪೋಹಗಳು ಎದ್ದಿದ್ದವು. ಹೀಗಾಗಿ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಸಾಕಷ್ಟು ಸಂದೇಹಮೂಡಿತ್ತು. ಸದ್ಯ ಮರಣೋತ್ತರ ವರದಿ ಬಹಿರಂಗವಾಗಿದ್ದು ನಿಜಾಂಶ ಹೊರಬಿದ್ದಿದೆ.
ಕಳೆದ ಶುಕ್ರವಾರ ಬೆಳಗ್ಗೆ ಮನೆಯ ಬಾಗಿಲನ್ನು ಆರ್ಯಾ ತೆರೆಯದೇ ಇದ್ದುದನ್ನು ಕಂಡ ಮನೆಗೆಲಸದ ಮಹಿಳೆ ನೆರೆಮನೆಯವರ ಬಳಿ ಹೇಳಿದಾಗ, ಸಂದೇಹಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್ಯಾ ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿರುವ ಅವರ ಫ್ಲ್ಯಾಟ್ನ ಬಾಗಿಲು ಮುರಿದು ಒಳ ಪ್ರವೇಶಿಸಿದ ಪೊಲೀಸರಿಗೆ ಆರ್ಯಾ ಹೆಣವಾಗಿ ಬಿದ್ದಿರುವುದು ಕಂಡುಬಂದಿತ್ತು.

35 ವರ್ಷದ ಈ ನಟಿ, ಮೂರನೇ ಮಹಡಿಯಲ್ಲಿರುವ ಬೆಡ್ರೂಮಿನಲ್ಲಿ ಮೃತಪಟ್ಟಿದ್ದರು. ಸಾಕುನಾಯಿಯೊಂದಿಗೆ ಫ್ಲ್ಯಾಟ್ನಲ್ಲಿ ವಾಸಿಸುತ್ತಿದ್ದ ಆರ್ಯ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಆಕೆಯ ಮನೆಯವರೂ ಅಲ್ಲಿಗೆ ಭೇಟಿ ನೀಡುತ್ತಿರಲಿಲ್ಲ. ಆನ್ಲೈನ್ನಲ್ಲೇ ಊಟ-ತಿಂಡಿ ಆರ್ಡರ್ ಮಾಡಿಕೊಂಡು ತಿನ್ನುತ್ತಿದ್ದರು. ಆದ್ದರಿಂದ ಸಾವು ಇನ್ನಷ್ಟು ನಿಗೂಢವಾಗಿತ್ತು.
ಅಲ್ಲದೆ ಆರ್ಯಾ ಮೃತ ದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಮೂಗಿನಿಂದ ತೀವ್ರ ರಕ್ತಸ್ರಾವ ಆಗಿ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮಾಡಿದ್ದಾರೆ.
ಇದೀಗ ಆರ್ಯ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಇದು ಕೊಲೆ ಅಥವಾ ಆತ್ಮಹತ್ಯೆಯಲ್ಲ ಎಂದು ವರದಿ ಬಹಿರಂಗಪಡಿಸಿದೆ. "ಇದು ಆತ್ಮಹತ್ಯೆ ಅಥವಾ ಕೊಲೆಯಲ್ಲ. ಇವರು ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದರು. ಅವರ ಹೊಟ್ಟೆಯಲ್ಲಿ ಆಲ್ಕೋಹಾಲ್ ಕಂಡುಬಂದಿದೆ. ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವಿಪರೀತವಾಗಿ ಆಲ್ಕೋಹಾಲ್ ಸೇವನೆ ಮಾಡಿದ್ದರಿಂದ ಸಾವು ಸಂಭವಿಸಿದೆ" ಎಂದು ಕೋಲ್ಕತಾ ಪೊಲೀಸ್ ಜಂಟಿ ಆಯುಕ್ತ ಮುರಳೀಧರ್ ಶರ್ಮಾ ಹೇಳಿದ್ದಾರೆ.

ಇದಕ್ಕೆ ಪೂರಕ ಎಂಬಂತೆ ಅವರ ರೂಮಿನಲ್ಲಿ ಮದ್ಯದ ಖಾಲಿಯಾಗಿದ್ದ ಬಾಟಲಿಗಳು ಪತ್ತೆಯಾಗಿವೆ. ಇವರು ಖಿನ್ನತೆಯಿಂದ ಕೂಡ ಬಳಲುತ್ತಿದ್ದರು ಎನ್ನಲಾಗಿದೆ. ಆರ್ಯಾ ಬ್ಯಾನರ್ಜಿ ಅವರ ಸಹೋದರಿ ಸಿಂಗಪೂರ್ ನಲ್ಲಿದ್ದು ಆಕೆ ಕೋಲ್ಕತ್ತಾದ ನಿವಾಸದಲ್ಲಿ ಒಂಟಿಯಾಗಿದ್ದರು.
ಪ್ರಸಿದ್ಧ ಸಿತಾರ್ ವಾದಕ ದಿವಂಗತ ಪಂಡಿತ್ ನಿಖಿಲ್ ಬಂಡೋಪಾಧ್ಯಾಯರ ಪುತ್ರಿ ಆಗಿರುವ ಆರ್ಯಾ, ಲವ್ ಸೆಕ್ಸ್ ಔರ್ ದೋಕಾ, ದ ಡರ್ಟಿ ಪಿಚ್ಚರ್ ಸೇರಿದಂತೆ ಹಲವು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಲ್ಲದೇ ಮುಂಬೈನಲ್ಲಿ ರೂಪದರ್ಶಿಯಾಗಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದರು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm