ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm