ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm