ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm