ಬ್ರೇಕಿಂಗ್ ನ್ಯೂಸ್
18-12-20 05:15 pm Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ. 18: ತಮಿಳು ಧಾರಾವಾಹಿ ನಟಿ, ನಿರೂಪಕಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ವಿಜೆ ಚಿತ್ರಾ ಸಾವಿಗೆ ಪತಿ ಹೇಮಂತ್ ನೇರ ಕಾರಣ ಎನ್ನಲಾಗಿತ್ತು, ನಂತರ ವಿಜೆ ಚಿತ್ರಾ ತಮ್ಮ ಮನೆಯವರೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ, ಚಿತ್ರಾ ಸಾಯುವ ದಿನ ತಾಯಿಯೊಂದಿಗೆ ಗಂಟೆಗಟ್ಟಲೆ ಮಾತನಾಡಿ ಜಗಳವಾಡಿದ್ದರು ಎನ್ನಲಾಯಿತು.
ಈಗ ವಿಜೆ ಚಿತ್ರಾ ಆಪ್ತ ಗೆಳತಿಯೊಬ್ಬರು ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದು, ಈ ಹೇಳಿಕೆ ಆಧರಿಸಿ ನೋಡುವುದಾದರೆ, ವಿಜೆ ಚಿತ್ರಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟನೊಬ್ಬನ ಕೈವಾಡವಿದ್ದಂತಿದೆ. ಮಾಧ್ಯಮದೊಟ್ಟಿಗೆ ಮಾತನಾಡಿರುವ ವಿಜೆ ಚಿತ್ರಾ ಆಪ್ತ ಗೆಳತಿ, ತೆಲುಗು ಯುವ ನಟನೊಬ್ಬನೊಂದಿಗೆ ವಿಜೆ ಚಿತ್ರಾಗೆ ಗೆಳತನವಿತ್ತು. ರಾಜಕೀಯ ಪ್ರಭಾವವನ್ನೂ ಹೊಂದಿರುವ ಆ ನಟ, ಚಿತ್ರಾಳ ಖಾಸಗಿ ವಿಡಿಯೋ ಮಾಡಿಕೊಂಡು, ಅದನ್ನು ಚಿತ್ರಾಳ ಪತಿ ಹೇಮಂತ್ ಗೆ ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದ' ಎಂದಿದ್ದಾರೆ.

ಚಿತ್ರಾ ಗೆಳತಿಯ ಸ್ಪೋಟಕ ಹೇಳಿಕೆ
ಚಿತ್ರಾ ಗೆಳತಿಯ ಈ ಹೇಳಿಕೆ ಚಿತ್ರಾ ಸಾವಿನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. 'ಆ ಯುವ ನಟ ಚಿತ್ರಾಳಿಗೆ ಸಾಕಷ್ಟು ಬೆದರಿಸಿದ್ದ, ಅಲ್ಲದೆ, 2021 ರ ಹೊಸವರ್ಷದಂದು ಒಂದು ರಾಜಕೀಯ ಪಾರ್ಟಿಗೆ ಬಂದು ಅಲ್ಲಿಯೇ ಉಳಿದುಕೊಳ್ಳಬೇಕೆಂದು ಒತ್ತಡ ಹಾಕಿದ್ದ' ಎಂದು ಸಹ ಹೇಳಿದ್ದಾರೆ.
ಸೆಟ್ನಲ್ಲಿ ಎಲ್ಲರೆದರು ಕೂಗಾಡಿದ್ದ ಹೇಮಂತ್
ಚಿತ್ರಾ ನಟಿಸುತ್ತಿದ್ದ ಧಾರಾವಾಹಿಯ ಸಹನಟ-ನಟಿಯರು ಹೇಳಿರುವಂತೆ, ಚಿತ್ರಾ ಆತ್ಮಹತ್ಯೆ ಮಾಡಿಕೊಂಡ ದಿನ, ಚಿತ್ರಾಳ ಪತಿ ಹೇಮಂತ್ ಸೆಟ್ಗೆ ಬಂದಿದ್ದ, ಸೆಟ್ನಲ್ಲಿಯೇ ಎಲ್ಲರ ಎದುರು ಚಿತ್ರಾ ಜೊತೆ ಜಗಳವಾಡಿ, ಆಕೆಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ.

ಜಗಳವಾಡಿದ್ದ ಪತಿ ಹೇಮಂತ್
ಹೋಟೆಲ್ಗೆ ಹೋದ ಬಳಿಕವೂ ಹೇಮಂತ್ ಜಗಳ ಮುಂದುವರೆಸಿದ್ದು, ಜೋರಾಗಿ ಕೂಗಾಡಿ, ಮದುವೆಯನ್ನು ಅಂತ್ಯಗೊಳಿಸುವುದಾಗಿ ಬೆದರಿಸಿದ್ದ. ಆ ನಂತರ ಚಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೇಮಂತ್ ಅನ್ನು ಪೊಲೀಸರು ಬಂಧಿಸಿದ್ದಾರೆ, ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಸತ್ಯ ಇನ್ನಷ್ಟೆ ಹೊರಬರಬೇಕಿದೆ.
ಗುಟ್ಟಾಗಿ ಮದುವೆಯಾಗಿದ್ದ ಚಿತ್ರಾ
ವಿಜೆ ಚಿತ್ರಾ ಹಾಗೂ ಹೇಮಂತ್ ಇದೇ ವರ್ಷದ ಅಕ್ಟೋಬರ್ 19 ರಂದು ಗುಟ್ಟಾಗಿ ರಿಜಿಸ್ಟರ್ ಮದುವೆ ಆಗಿದ್ದರು. ಇಬ್ಬರೂ ಫೆಬ್ರವರಿಯಲ್ಲಿ ತಮ್ಮ ಮದುವೆಯನ್ನು ಬಹಿರಂಗಗೊಳಿಸುವ ಯೋಚನೆಯಲ್ಲಿದ್ದರು. ಆದರೆ ಚಿತ್ರಾ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm