ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm