ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm