ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm