ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm