ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm