ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.
ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm