ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm