ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm